Categories: Andolana originals

ಓದುಗರ ಪತ್ರ: ಟೋಲ್‌ನಿಂದ ಮುಕ್ತಿ ಎಂದು?

ದೇಶದಲ್ಲಿ ೩೦ ಸಾವಿರ ಕಿ.ಮೀ.ದೂರದಷ್ಟು ದ್ವಿಪಥ ಹೆದ್ದಾರಿಗಳಿವೆ. ಇವುಗಳನ್ನು ೧೦ ಲಕ್ಷ ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥವಾಗಿ ನಿರ್ಮಾಣ, ನಿರ್ವಹಣೆ, ವರ್ಗಾವಣೆ, ಮಾದರಿಯಡಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ೧೫ ವರ್ಷಗಳವರೆಗೆ ಸಚಿವಾಲಯವೇ ಟೋಲ್ ಸಂಗ್ರಹಿಸಲಿದೆ. ಆ ನಂತರ ಖಾಸಗಿಯವರು ನಿರ್ವಹಿಸಲಿದ್ದಾರೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಹೇಳಿರುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಬಹುತೇಕ ರಸ್ತೆಗಳನ್ನು ಅಲ್ಪ ಸ್ವಲ್ಪ ವಿಸ್ತರಿಸಿ, ಹೆದ್ದಾರಿ ಹಣೆ ಪಟ್ಟಿ ನೀಡಿ ಟೋಲ್ ಸಂಗ್ರಹಿಸಲಾಗುತ್ತಿದೆ. ೨೦-೩೦ ವರ್ಷಗಳ ಹಿಂದೆ ಟೋಲ್ ಸಂಗ್ರಹ ಆದರ ನಿರ್ಮಾಣ ವೆಚ್ಚವನ್ನು ಆಧರಿಸಿ ೪- ೫ ವರ್ಷ ಎಂದು ನಿಗದಿಯಾಗಿರುತ್ತಿತ್ತು. ಅಲ್ಲದೆ ಈಗಿನಂತೆ ಪ್ರತಿ ವರ್ಷ ಟೋಲ್ ಶುಲ್ಕ ಏರಿಕೆ ಮಾಡುವ ಪದ್ಧತಿಯೂ ಇರಲಿಲ್ಲ. ಆದರೆ ಈಗಿನ ಕೇಂದ್ರ ಸರ್ಕಾರ ಪ್ರತಿ ವರ್ಷ ಏರಿಕೆ ಮಾಡುತ್ತಾ, ಟೋಲ್ ಸಂಗ್ರಹವನ್ನು ಇಂತಿಷ್ಟು ವರ್ಷ ಎಂದು ನಿಗದಿ ಮಾಡಿ ಜನರನ್ನು ಹಗಲು ದರೋಡೆ ಮಾಡುತ್ತಿದೆ. ಈ ಬಗ್ಗೆ ಸರ್ಕಾರ ತನ್ನ ಧೋರಣೆಯನ್ನು ಬದಲಿಸಿ ಪ್ರಯಾಣಿಕ ಸ್ನೇಹಿಯಾಗಲಿ.

ಈಗಾಗಲೇ, ಟೋಲ್, ರಸ್ತೆ ತೆರಿಗೆ, ವಾಹನದ ಖರೀದಿ ಮೇಲಿನ ದುಬಾರಿ ಜಿ ಎಸ್ ಟಿ, ಪೆಟ್ರೋಲ್, ಡೀಸೆಲ್ ಮೇಲಿನ ದುಬಾರಿ ತೆರಿಗೆಗಳಿಂದ ಜನರು ಬಸವಳಿದಿದ್ದಾರೆ. ಆಡಳಿತಾರೂಢ ಸರ್ಕಾರಗಳು ಜನರ ಮೇಲಿನ ಹೊರೆ ತಗ್ಗಿಸಲು ಕಾಳಜಿ ವಹಿಸಬೇಕು.

-ಮುಳ್ಳೂರು ಪ್ರಕಾಶ್, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago