ದೇಶದಲ್ಲಿ ೩೦ ಸಾವಿರ ಕಿ.ಮೀ.ದೂರದಷ್ಟು ದ್ವಿಪಥ ಹೆದ್ದಾರಿಗಳಿವೆ. ಇವುಗಳನ್ನು ೧೦ ಲಕ್ಷ ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥವಾಗಿ ನಿರ್ಮಾಣ, ನಿರ್ವಹಣೆ, ವರ್ಗಾವಣೆ, ಮಾದರಿಯಡಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ೧೫ ವರ್ಷಗಳವರೆಗೆ ಸಚಿವಾಲಯವೇ ಟೋಲ್ ಸಂಗ್ರಹಿಸಲಿದೆ. ಆ ನಂತರ ಖಾಸಗಿಯವರು ನಿರ್ವಹಿಸಲಿದ್ದಾರೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಹೇಳಿರುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿದೆ.
ಇತ್ತೀಚಿನ ವರ್ಷಗಳಲ್ಲಿ ಬಹುತೇಕ ರಸ್ತೆಗಳನ್ನು ಅಲ್ಪ ಸ್ವಲ್ಪ ವಿಸ್ತರಿಸಿ, ಹೆದ್ದಾರಿ ಹಣೆ ಪಟ್ಟಿ ನೀಡಿ ಟೋಲ್ ಸಂಗ್ರಹಿಸಲಾಗುತ್ತಿದೆ. ೨೦-೩೦ ವರ್ಷಗಳ ಹಿಂದೆ ಟೋಲ್ ಸಂಗ್ರಹ ಆದರ ನಿರ್ಮಾಣ ವೆಚ್ಚವನ್ನು ಆಧರಿಸಿ ೪- ೫ ವರ್ಷ ಎಂದು ನಿಗದಿಯಾಗಿರುತ್ತಿತ್ತು. ಅಲ್ಲದೆ ಈಗಿನಂತೆ ಪ್ರತಿ ವರ್ಷ ಟೋಲ್ ಶುಲ್ಕ ಏರಿಕೆ ಮಾಡುವ ಪದ್ಧತಿಯೂ ಇರಲಿಲ್ಲ. ಆದರೆ ಈಗಿನ ಕೇಂದ್ರ ಸರ್ಕಾರ ಪ್ರತಿ ವರ್ಷ ಏರಿಕೆ ಮಾಡುತ್ತಾ, ಟೋಲ್ ಸಂಗ್ರಹವನ್ನು ಇಂತಿಷ್ಟು ವರ್ಷ ಎಂದು ನಿಗದಿ ಮಾಡಿ ಜನರನ್ನು ಹಗಲು ದರೋಡೆ ಮಾಡುತ್ತಿದೆ. ಈ ಬಗ್ಗೆ ಸರ್ಕಾರ ತನ್ನ ಧೋರಣೆಯನ್ನು ಬದಲಿಸಿ ಪ್ರಯಾಣಿಕ ಸ್ನೇಹಿಯಾಗಲಿ.
ಈಗಾಗಲೇ, ಟೋಲ್, ರಸ್ತೆ ತೆರಿಗೆ, ವಾಹನದ ಖರೀದಿ ಮೇಲಿನ ದುಬಾರಿ ಜಿ ಎಸ್ ಟಿ, ಪೆಟ್ರೋಲ್, ಡೀಸೆಲ್ ಮೇಲಿನ ದುಬಾರಿ ತೆರಿಗೆಗಳಿಂದ ಜನರು ಬಸವಳಿದಿದ್ದಾರೆ. ಆಡಳಿತಾರೂಢ ಸರ್ಕಾರಗಳು ಜನರ ಮೇಲಿನ ಹೊರೆ ತಗ್ಗಿಸಲು ಕಾಳಜಿ ವಹಿಸಬೇಕು.
-ಮುಳ್ಳೂರು ಪ್ರಕಾಶ್, ಮೈಸೂರು
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…