ಚಾಮರಾಜನಗರ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಜನರು ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ.
ಗ್ರಾಮದ ಒಳಚರಂಡಿಗಳು ಹೂಳು ತುಂಬಿಕೊಂಡಿದ್ದು, ಕೆಲ ಭಾಗಗಳಲ್ಲಿ ಕುಸಿದು ಹೋಗಿವೆ. ಇದರಿಂದಾಗಿ ಚರಂಡಿ ನೀರೆಲ್ಲ ರಸ್ತೆಗೆ ಹರಿಯುತ್ತಿದ್ದು, ಗ್ರಾಮದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಈ ಚರಂಡಿಗಳನ್ನು ನಿರ್ಮಿಸಿ ಅನೇಕ ವರ್ಷಗಳೇ ಕಳೆದಿವೆ. ಅವುಗಳನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಚರಂಡಿಗಳು ಕುಸಿದು ಬಿದ್ದಿದ್ದು, ಕೆಲ ಭಾಗಗಳಲ್ಲಂತೂ ಚರಂಡಿ ನೀರೆಲ್ಲ ಮನೆಯ ಬಾಗಿಲಿಗೆ ಹರಿಯುತ್ತಿದೆ. ಇನ್ನು ಗ್ರಾಮದ ರಸ್ತೆಗಳಲ್ಲಿಯೂ ಗುಂಡಿ
ಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇವುಗಳೊಂದಿಗೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ, ಶೌಚಾಲಯದ ಕೊರತೆ ಹಾಗೂ ವಿದ್ಯುತ್ ಸಮಸ್ಯೆಯೂ ಕಾಡುತ್ತಿದ್ದು, ಮೂಲ ಸೌಕರ್ಯ ಗಳಿಂದ ವಂಚಿತರಾಗಿ ಜನರು ಸಂಕಷ್ಟದ ಜೀವನ ಸಾಗಿಸುವಂತಾಗಿದೆ. ಜತೆಗೆ ಗ್ರಾಮದಲ್ಲಿ ಅಶುಚಿತ್ವದಿಂದಾಗಿ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಸಮಸ್ಯೆಗಳ ಬಗ್ಗೆ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮೇಲಧಿಕಾರಿಗಳು ಈ ಬಗ್ಗೆ ಗಮನಹರಿಸಿ ಮೂಲಸೌರ್ಕಯಗಳನ್ನು ಕಲ್ಪಿಸಬೇಕಿದೆ.
-ಎಸ್. ಎಂ. ನವೀನ, ಸಿದ್ದಯ್ಯನಪುರ, ಚಾಮರಾಜನಗರ ತಾ.
ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…
ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…
ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…
ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್…
ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…