ಚಾಮರಾಜನಗರ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಜನರು ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ.
ಗ್ರಾಮದ ಒಳಚರಂಡಿಗಳು ಹೂಳು ತುಂಬಿಕೊಂಡಿದ್ದು, ಕೆಲ ಭಾಗಗಳಲ್ಲಿ ಕುಸಿದು ಹೋಗಿವೆ. ಇದರಿಂದಾಗಿ ಚರಂಡಿ ನೀರೆಲ್ಲ ರಸ್ತೆಗೆ ಹರಿಯುತ್ತಿದ್ದು, ಗ್ರಾಮದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಈ ಚರಂಡಿಗಳನ್ನು ನಿರ್ಮಿಸಿ ಅನೇಕ ವರ್ಷಗಳೇ ಕಳೆದಿವೆ. ಅವುಗಳನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಚರಂಡಿಗಳು ಕುಸಿದು ಬಿದ್ದಿದ್ದು, ಕೆಲ ಭಾಗಗಳಲ್ಲಂತೂ ಚರಂಡಿ ನೀರೆಲ್ಲ ಮನೆಯ ಬಾಗಿಲಿಗೆ ಹರಿಯುತ್ತಿದೆ. ಇನ್ನು ಗ್ರಾಮದ ರಸ್ತೆಗಳಲ್ಲಿಯೂ ಗುಂಡಿ
ಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇವುಗಳೊಂದಿಗೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ, ಶೌಚಾಲಯದ ಕೊರತೆ ಹಾಗೂ ವಿದ್ಯುತ್ ಸಮಸ್ಯೆಯೂ ಕಾಡುತ್ತಿದ್ದು, ಮೂಲ ಸೌಕರ್ಯ ಗಳಿಂದ ವಂಚಿತರಾಗಿ ಜನರು ಸಂಕಷ್ಟದ ಜೀವನ ಸಾಗಿಸುವಂತಾಗಿದೆ. ಜತೆಗೆ ಗ್ರಾಮದಲ್ಲಿ ಅಶುಚಿತ್ವದಿಂದಾಗಿ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಸಮಸ್ಯೆಗಳ ಬಗ್ಗೆ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮೇಲಧಿಕಾರಿಗಳು ಈ ಬಗ್ಗೆ ಗಮನಹರಿಸಿ ಮೂಲಸೌರ್ಕಯಗಳನ್ನು ಕಲ್ಪಿಸಬೇಕಿದೆ.
-ಎಸ್. ಎಂ. ನವೀನ, ಸಿದ್ದಯ್ಯನಪುರ, ಚಾಮರಾಜನಗರ ತಾ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…