ಚಾಮರಾಜನಗರ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಜನರು ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ.
ಗ್ರಾಮದ ಒಳಚರಂಡಿಗಳು ಹೂಳು ತುಂಬಿಕೊಂಡಿದ್ದು, ಕೆಲ ಭಾಗಗಳಲ್ಲಿ ಕುಸಿದು ಹೋಗಿವೆ. ಇದರಿಂದಾಗಿ ಚರಂಡಿ ನೀರೆಲ್ಲ ರಸ್ತೆಗೆ ಹರಿಯುತ್ತಿದ್ದು, ಗ್ರಾಮದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಈ ಚರಂಡಿಗಳನ್ನು ನಿರ್ಮಿಸಿ ಅನೇಕ ವರ್ಷಗಳೇ ಕಳೆದಿವೆ. ಅವುಗಳನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಚರಂಡಿಗಳು ಕುಸಿದು ಬಿದ್ದಿದ್ದು, ಕೆಲ ಭಾಗಗಳಲ್ಲಂತೂ ಚರಂಡಿ ನೀರೆಲ್ಲ ಮನೆಯ ಬಾಗಿಲಿಗೆ ಹರಿಯುತ್ತಿದೆ. ಇನ್ನು ಗ್ರಾಮದ ರಸ್ತೆಗಳಲ್ಲಿಯೂ ಗುಂಡಿ
ಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇವುಗಳೊಂದಿಗೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ, ಶೌಚಾಲಯದ ಕೊರತೆ ಹಾಗೂ ವಿದ್ಯುತ್ ಸಮಸ್ಯೆಯೂ ಕಾಡುತ್ತಿದ್ದು, ಮೂಲ ಸೌಕರ್ಯ ಗಳಿಂದ ವಂಚಿತರಾಗಿ ಜನರು ಸಂಕಷ್ಟದ ಜೀವನ ಸಾಗಿಸುವಂತಾಗಿದೆ. ಜತೆಗೆ ಗ್ರಾಮದಲ್ಲಿ ಅಶುಚಿತ್ವದಿಂದಾಗಿ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಸಮಸ್ಯೆಗಳ ಬಗ್ಗೆ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮೇಲಧಿಕಾರಿಗಳು ಈ ಬಗ್ಗೆ ಗಮನಹರಿಸಿ ಮೂಲಸೌರ್ಕಯಗಳನ್ನು ಕಲ್ಪಿಸಬೇಕಿದೆ.
-ಎಸ್. ಎಂ. ನವೀನ, ಸಿದ್ದಯ್ಯನಪುರ, ಚಾಮರಾಜನಗರ ತಾ.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…