Andolana originals

ಓದುಗರ ಪತ್ರ: ಸಮಸ್ಯೆಗಳಿಗೆ ಮುಕ್ತಿ ಎಂದು?

ಚಾಮರಾಜನಗರ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಜನರು ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ.

 

ಗ್ರಾಮದ ಒಳಚರಂಡಿಗಳು ಹೂಳು ತುಂಬಿಕೊಂಡಿದ್ದು, ಕೆಲ ಭಾಗಗಳಲ್ಲಿ ಕುಸಿದು ಹೋಗಿವೆ. ಇದರಿಂದಾಗಿ ಚರಂಡಿ ನೀರೆಲ್ಲ ರಸ್ತೆಗೆ ಹರಿಯುತ್ತಿದ್ದು, ಗ್ರಾಮದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಈ ಚರಂಡಿಗಳನ್ನು ನಿರ್ಮಿಸಿ ಅನೇಕ ವರ್ಷಗಳೇ ಕಳೆದಿವೆ. ಅವುಗಳನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಚರಂಡಿಗಳು ಕುಸಿದು ಬಿದ್ದಿದ್ದು, ಕೆಲ ಭಾಗಗಳಲ್ಲಂತೂ ಚರಂಡಿ ನೀರೆಲ್ಲ ಮನೆಯ ಬಾಗಿಲಿಗೆ ಹರಿಯುತ್ತಿದೆ. ಇನ್ನು ಗ್ರಾಮದ ರಸ್ತೆಗಳಲ್ಲಿಯೂ ಗುಂಡಿ

ಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇವುಗಳೊಂದಿಗೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ, ಶೌಚಾಲಯದ ಕೊರತೆ ಹಾಗೂ ವಿದ್ಯುತ್ ಸಮಸ್ಯೆಯೂ ಕಾಡುತ್ತಿದ್ದು, ಮೂಲ ಸೌಕರ್ಯ ಗಳಿಂದ ವಂಚಿತರಾಗಿ ಜನರು ಸಂಕಷ್ಟದ ಜೀವನ ಸಾಗಿಸುವಂತಾಗಿದೆ. ಜತೆಗೆ ಗ್ರಾಮದಲ್ಲಿ ಅಶುಚಿತ್ವದಿಂದಾಗಿ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಸಮಸ್ಯೆಗಳ ಬಗ್ಗೆ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮೇಲಧಿಕಾರಿಗಳು ಈ ಬಗ್ಗೆ ಗಮನಹರಿಸಿ ಮೂಲಸೌರ್ಕಯಗಳನ್ನು ಕಲ್ಪಿಸಬೇಕಿದೆ.

-ಎಸ್. ಎಂ. ನವೀನ, ಸಿದ್ದಯ್ಯನಪುರ, ಚಾಮರಾಜನಗರ ತಾ.

 

andolana

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

2 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

5 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

9 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

13 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

13 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

13 hours ago