Mysore
32
broken clouds

Social Media

ಮಂಗಳವಾರ, 05 ಮೇ 2026
Light
Dark

ಓದುಗರ ಪತ್ರ: ತಾಲ್ಲೂಕು ಕಚೇರಿ ಆವರಣದಲ್ಲಿ ಕಸ ತೆರವುಗೊಳಿಸಿ

dgp murder case

ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ ನಿತ್ಯ ಆಗಮಿಸುವ ಸಾರ್ವಜನಿಕರಿಗೆ ಪ್ರತಿನಿತ್ಯ ಕಸದ ರಾಶಿಯೇ ದರ್ಶನವಾಗುತ್ತಿದೆ.

ಮೈಸೂರು ನಗರವನ್ನು ಸ್ವಚ್ಛನಗರಿ ಯನ್ನಾಗಿಸಲು ಶ್ರಮಿಸುತ್ತಿರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸ್ವಚ್ಛತಾ ಅಭಿಯಾನದ ಅಂಗವಾಗಿ ವಾಕಥಾನ್, ರಸಪ್ರಶ್ನೆ, ಸೈಕ್ಲೋಥಾನ್ ಆಯೋಜಿಸುತ್ತಿದ್ದಾರೆ. ಆದರೆ ನಗರದ ಮಧ್ಯಭಾಗದಲ್ಲಿರುವ ತಾಲ್ಲೂಕು ಕಚೇರಿಯ ಆವರಣವನ್ನು ಸ್ವಚ್ಛವಾಗಿಡಬೇಕು ಎಂಬುದು ಅವರಿಗೆ ತಿಳಿಯದೇ ಇರುವುದು ಬೇಸರದ ಸಂಗತಿಯಾಗಿದೆ.

ಸಂಬಂಧಪಟ್ಟವರು ಕೂಡಲೇ ತಾಲ್ಲೂಕು ಕಚೇರಿ ಆವರಣದಲ್ಲಿರುವ ಕಸವನ್ನು ತೆರವುಗೊಳಿಸುವ ಮೂಲಕ ಸ್ವಚ್ಛತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ.

 – ಭಾಮಿ ವಿ.ಶೆಣೈ, ಮೈಸೂರು ಗ್ರಾಹಕರ ಪರಿಷತ್, ಮೈಸೂರು

 

 

Tags:
error: Content is protected !!