Andolana originals

ಓದುಗರ ಪತ್ರ: ನಗದು ರಹಿತ ಚಿಕಿತ್ಸೆ ಎಲ್ಲ ಸರ್ಕಾರಿ ನೌಕರರಿಗೂ ಸಿಗಲಿ

ರಾಜ್ಯ ಸರ್ಕಾರದ ವತಿಯಿಂದ ಕೆಎಸ್‌ಆರ್‌ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗೆ ಚಾಲನೆ ನೀಡಿರುವುದು ಸ್ವಾಗತಾರ್ಹ. ಈ ಯೋಜನೆಯ ಮೂಲಕ ರಾಜ್ಯ ಸರ್ಕಾರ ಸಾರಿಗೆ ಇಲಾಖೆಯ ನೌಕರರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ. ಈ ಯೋಜನೆಯಡಿ ಸಾರಿಗೆ ನೌಕರರು ಹಾಗೂ ಅವರ ಕುಟುಂಬದವರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲಾಗಿದ್ದು, ಇದರಿಂದ ಸಾರಿಗೆ ನೌಕರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಇರುವ ಎಲ್ಲ ಸರ್ಕಾರಿ ಆಸ್ಪತ್ರೆಗಳು ಹಾಗೂ ೨೫೦ ಖಾಸಗಿ ಆಸ್ಪತ್ರೆಗಳೊಂದಿಗೆ ಸರ್ಕಾರ ಒಡಬಂಡಿಕೆ ಮಾಡಿ ಕೊಂಡಿದೆ. ಈ ಸೌಲಭ್ಯವನ್ನು ಸರ್ಕಾರ ಎಲ್ಲ ಇಲಾಖೆಗಳ ನೌಕರರಿಗೂ ವಿಸ್ತರಿಸಬೇಕು ಎಂಬುದು ಸರ್ಕಾರಿ ನೌಕರರ ಬೇಡಿಕೆಯಾಗಿದೆ. ಆದ್ದರಿಂದ ಈ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯನ್ನು ರಾಜ್ಯ ಸರ್ಕಾರ ಎಲ್ಲ ನೌಕರರಿಗೂ ವಿಸ್ತರಿಸಿದರೆ ಅನುಕೂಲವಾಗಲಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

 

andolana

Recent Posts

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

9 mins ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

37 mins ago

ಮಂಡ್ಯ| ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರವಿಕುಮಾರ್‌ ಗುದ್ದಲಿಪೂಜೆ

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾತನೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ್‌ ರವಿಕುಮಾರ್‌…

49 mins ago

ಕೆಎಎಸ್‌ ಮುಖ್ಯ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ: ಕೆಪಿಎಸ್‌ಸಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಆಡಳಿತ ಸೇವೆ( ಕೆಎಎಸ್)ಯ ಮುಖ್ಯ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ…

1 hour ago

ಹಾಸನ: ವಿಷಕಾರಿ ಮೇವು ತಿಂದು 70ಕ್ಕೂ ಕುರಿಗಳು ಸಾವು

ಹಾಸನ: ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಜಾವಗಲ್‌ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ…

1 hour ago

ಶ್ರೀರಂಗಪಟ್ಟಣ: ವೈಭವದಿಂದ ಜರುಗಿದ ಕರೀಘಟ್ಟ ವೆಂಕಟರಮಣಸ್ವಾಮಿ ಬ್ರಹ್ಮೋತ್ಸವ

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕರೀಘಟ್ಟ ವೆಂಕಟರಮಣ ಸ್ವಾಮಿಯ ಬ್ರಹ್ಮೋತ್ಸವ ಇಂದು ವೈಭವದಿಂದ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತ ಮುತ್ತ ಇರುವ…

2 hours ago