Andolana originals

ಓದುಗರ ಪತ್ರ: ನಗದು ರಹಿತ ಚಿಕಿತ್ಸೆ ಎಲ್ಲ ಸರ್ಕಾರಿ ನೌಕರರಿಗೂ ಸಿಗಲಿ

ರಾಜ್ಯ ಸರ್ಕಾರದ ವತಿಯಿಂದ ಕೆಎಸ್‌ಆರ್‌ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗೆ ಚಾಲನೆ ನೀಡಿರುವುದು ಸ್ವಾಗತಾರ್ಹ. ಈ ಯೋಜನೆಯ ಮೂಲಕ ರಾಜ್ಯ ಸರ್ಕಾರ ಸಾರಿಗೆ ಇಲಾಖೆಯ ನೌಕರರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ. ಈ ಯೋಜನೆಯಡಿ ಸಾರಿಗೆ ನೌಕರರು ಹಾಗೂ ಅವರ ಕುಟುಂಬದವರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲಾಗಿದ್ದು, ಇದರಿಂದ ಸಾರಿಗೆ ನೌಕರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಇರುವ ಎಲ್ಲ ಸರ್ಕಾರಿ ಆಸ್ಪತ್ರೆಗಳು ಹಾಗೂ ೨೫೦ ಖಾಸಗಿ ಆಸ್ಪತ್ರೆಗಳೊಂದಿಗೆ ಸರ್ಕಾರ ಒಡಬಂಡಿಕೆ ಮಾಡಿ ಕೊಂಡಿದೆ. ಈ ಸೌಲಭ್ಯವನ್ನು ಸರ್ಕಾರ ಎಲ್ಲ ಇಲಾಖೆಗಳ ನೌಕರರಿಗೂ ವಿಸ್ತರಿಸಬೇಕು ಎಂಬುದು ಸರ್ಕಾರಿ ನೌಕರರ ಬೇಡಿಕೆಯಾಗಿದೆ. ಆದ್ದರಿಂದ ಈ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯನ್ನು ರಾಜ್ಯ ಸರ್ಕಾರ ಎಲ್ಲ ನೌಕರರಿಗೂ ವಿಸ್ತರಿಸಿದರೆ ಅನುಕೂಲವಾಗಲಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

 

andolana

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

1 hour ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

1 hour ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

2 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

2 hours ago