ರಾಜ್ಯ ಸರ್ಕಾರದ ವತಿಯಿಂದ ಕೆಎಸ್ಆರ್ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗೆ ಚಾಲನೆ ನೀಡಿರುವುದು ಸ್ವಾಗತಾರ್ಹ. ಈ ಯೋಜನೆಯ ಮೂಲಕ ರಾಜ್ಯ ಸರ್ಕಾರ ಸಾರಿಗೆ ಇಲಾಖೆಯ ನೌಕರರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ. ಈ ಯೋಜನೆಯಡಿ ಸಾರಿಗೆ ನೌಕರರು ಹಾಗೂ ಅವರ ಕುಟುಂಬದವರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲಾಗಿದ್ದು, ಇದರಿಂದ ಸಾರಿಗೆ ನೌಕರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಇರುವ ಎಲ್ಲ ಸರ್ಕಾರಿ ಆಸ್ಪತ್ರೆಗಳು ಹಾಗೂ ೨೫೦ ಖಾಸಗಿ ಆಸ್ಪತ್ರೆಗಳೊಂದಿಗೆ ಸರ್ಕಾರ ಒಡಬಂಡಿಕೆ ಮಾಡಿ ಕೊಂಡಿದೆ. ಈ ಸೌಲಭ್ಯವನ್ನು ಸರ್ಕಾರ ಎಲ್ಲ ಇಲಾಖೆಗಳ ನೌಕರರಿಗೂ ವಿಸ್ತರಿಸಬೇಕು ಎಂಬುದು ಸರ್ಕಾರಿ ನೌಕರರ ಬೇಡಿಕೆಯಾಗಿದೆ. ಆದ್ದರಿಂದ ಈ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯನ್ನು ರಾಜ್ಯ ಸರ್ಕಾರ ಎಲ್ಲ ನೌಕರರಿಗೂ ವಿಸ್ತರಿಸಿದರೆ ಅನುಕೂಲವಾಗಲಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…