ಓದುಗರ ಪತ್ರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ ಕೂಡ ನಿಗದಿ ಮಾಡಿದೆ. ಹಲವಾರು ವರ್ಷಗಳಿಂದ ಹುದ್ದೆ ಬಯಸಿ ಅಧ್ಯಯನದಲ್ಲಿ ತೊಡಗಿರುವ ಆಕಾಂಕ್ಷಿಗಳಿಗೆ ಖಂಡಿತ ತೊಂದರೆ ಆಗದು.
ಆದರೆ, ಖಾಸಗಿ ಸಂಸ್ಥೆಗಳಲ್ಲಿ ಇನ್ನಿತರ ಕಡೆ ಅರೆ ಕಾಲಿಕ ಕೆಲಸ ನಿರ್ವಹಿಸುತ್ತ ತಮ್ಮ ಕುಟುಂಬದ ಜೀವನಕ್ಕೂ ಸಹಾಯ ಮಾಡುತ್ತಾ, ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ತಯಾರಿ ನಡೆಸುವ ಅಸಂಖ್ಯಾತ ಅಭ್ಯರ್ಥಿಗಳಿಗೆ ಸಮಯಾವಕಾಶ ಇಲ್ಲದೆ ಈ ವೇಳಾಪಟ್ಟಿಯಂತೂ ಸದ್ಯ ಕಬ್ಬಿಣದ ಕಡಲೆ ಆಗಿದೆ.
ಮುಂಬರುವ ಅಧಿಸೂಚನೆಗಳಲ್ಲಿ ರಾಜ್ಯ ಸರ್ಕಾರದ ಪ್ರತಿಯೊಂದು ಪರೀಕ್ಷೆಗಳಲ್ಲೂ ಎಲ್ಲ ರೀತಿಯ ಅಭ್ಯರ್ಥಿಗಳನ್ನು ಪರಿಗಣಿಸಿ ಸರ್ವರಿಗೂ ಒಳಿತಾಗುವ ದೃಷ್ಟಿಯಿಂದ ಕೆಪಿಎಸ್ಸಿ ಅಥವಾ ಕೆಇಎ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದ ನಂತರ ಪರೀಕ್ಷೆ ಬರೆಯುವ ದಿನಾಂಕವನ್ನು ಕನಿಷ್ಠ ನೂರು ದಿನಗಳ ಕಾಲಾವಕಾಶ ಮಿತಿ ಕಡ್ಡಾಯವಾಗಿ ನೀಡಬೇಕಿದೆ.
– ಅನಿಲ್ ಕುಮಾರ್, ನಂಜನಗೂಡು.
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…
ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …