Andolana originals

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು ಅರ್ಜಿಗಳ ನಿರ್ವಹಣೆಯೊಂದಿಗೆ ಸುಮಾರು ೭ ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ.

ಈ ವರ್ಷದ ಆರಂಭದಲ್ಲಿ ನಿಗಮ-ಮಂಡಳಿಯ ಹಲವಾರು ಪರೀಕ್ಷೆಗಳನ್ನು ನಡೆಸಿ ಯಾವುದೇ ಗೊಂದಲವಿಲ್ಲದೆ ಫಲಿತಾಂಶ ಪ್ರಕಟಿಸಿರುವುದು ಶ್ಲಾಘನೀಯ. ಕಳಂಕ / ವಿವಾದವಿಲ್ಲದೆ ಪರೀಕ್ಷೆ ಆಯೋಜಿಸಿ ಅಂಕಗಳನ್ನು ಪ್ರಕಟಿಸಿ ತದನಂತರ ಫಲಿತಾಂಶ,ಆಯ್ಕೆ ಪ್ರಕ್ರಿಯೆ ಸುಗಮವಾಗಿ ನಡೆಸುತ್ತದೆ ಕೆಇಎ. ಸದ್ಯ, ಒಳ ಮೀಸಲಾತಿ ಸಂಬಂಧ ಸಮಸ್ಯೆ ಬಗೆಹರಿದಿದ್ದು ರಾಜ್ಯದಲ್ಲಿ ಉದ್ಯೋಗದ ಸಮಸ್ಯೆಯನ್ನು ನೀಗಿಸುವ ದಿಸೆಯಲ್ಲಿ ೫೬,೦೦೦ ಹುದ್ದೆಗಳನ್ನು ಭರ್ತಿಗೊಳಿಸುವ ನಿರ್ಣಯವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಕ್ಕೆ ಬಂದ ಮೊದಲ ದಿನವೇ ಮಾಡಿದ್ದಾರೆ.

ಅಧಿಸೂಚನೆಯಾಗದೆ ದಣಿದು ಬಸವಳಿದ ಯುವ ಜನರಿಗೆ ಹುದ್ದೆ ಭರ್ತಿ ಸಂಬಂಧ ಸಿಎಂ ಉವಾಚವು ಕೇವಲ ಮಾತಾಗದೇ ಗ್ಯಾರಂಟಿ ಆದರೆ ಈ ಹೊತ್ತಿನಲ್ಲಿ ನಿಜಕ್ಕೂ ಯುವ ಜನತೆಗೆ ಟಾನಿಕ್ ಆಗಬಲ್ಲದು. ಇಂದು ಉಖಾರ್ಹ ವಿಷಯ: ಕೆಇಎ ಪರೀಕ್ಷೆ ನಡೆಸಿದ ಕೆಲವೇ ದಿನಗಳ ಅಂತರದಲ್ಲಿ ಪ್ರತಿಯೊಬ್ಬರ ಅಂಕಗಳನ್ನು ಪ್ರಕಟಿಸುತ್ತದೆ. ಆದರೆ, ಕೆಪಿಎಸ್‌ಸಿಯಿಂದ ಇವತ್ತಿನವರೆಗೂ ಅದು ಸಾಧ್ಯವಾಗಿಲ್ಲ ಏಕೆ? ಮೊನ್ನೆ ಪೊಲೀಸ್ ಕಾನ್ಸ್‌ಟೇಬಲ್‌ನ ೩ ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗಾಗಿನ ಜವಾಬ್ದಾರಿಯನ್ನು ಕೆಇಎಗೆ ನೀಡಿದ್ದು ಸ್ವಾಗತಾರ್ಹ. ಸಿಎಂ ಡಿ.ಕೆ. ಶಿವಕುಮಾರ್ ತಾವು ನುಡಿದಿರುವಂತೆ ೫೬ ಸಾವಿರ ಬೃಹತ್ ಹುದ್ದೆಗಳನ್ನು ಶತಾಯ ಗತಾಯ ತುಂಬಬೇಕಿದೆ. ಅರ್ಹ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಹುದ್ದೆ ನ್ಯಾಯಯುತವಾಗಿ ದೊರಕಲು ಪರೀಕ್ಷಾ ಜವಾಬ್ದಾರಿಯನ್ನು ಸಾಧ್ಯವಾದಷ್ಟು ಕೆಇಎ ಗೆ ನೀಡಲಿ. ಈ ಮೊದಲಿನಿಂದಲೂ, ರಾಜ್ಯದಲ್ಲಿ ಅಧಿಕಾರದಲ್ಲಿ ಯಾವುದೇ ಸರ್ಕಾರವಿದ್ದರೂ ಕೆಪಿಎಸ್‌ಸಿ ಭ್ರಷ್ಟಾಚಾರ, ಪಕ್ಷಪಾತ, ಲಂಚ, ರಾಜಕಾರಣಿಗಳ ಪ್ರಭಾವ ತಡೆಯಲು ಸಾಧ್ಯವೇ ಆಗುತ್ತಿಲ್ಲ. ಇದು ಇವತ್ತಿಗೂ ಅರ್ಥವಾಗದ ಮಿಲಿಯನ್ ಡಾಲರ್ ಪ್ರಶ್ನೆ! ಭವಿಷ್ಯದಲ್ಲಿ ನೇಮಕಾತಿ ಸಂಬಂಧ ಪ್ರತಿಯೊಂದು ಇಲಾಖಾ ಪರೀಕ್ಷೆಗಳ ಹೊಣೆಯನ್ನೂ ಕೆಇಎಗೆ ಕೊಡುವುದು ಸ್ಪರ್ಧಾ ಆಕಾಂಕ್ಷಿಗಳ ಹಿತ ದೃಷ್ಟಿಯಿಂದ ಒಳ್ಳೆಯದು.

– ಅನಿಲ್ ಕುಮಾರ್, ನಂಜನಗೂಡು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago