Andolana originals

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು ಅರ್ಜಿಗಳ ನಿರ್ವಹಣೆಯೊಂದಿಗೆ ಸುಮಾರು ೭ ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ.

ಈ ವರ್ಷದ ಆರಂಭದಲ್ಲಿ ನಿಗಮ-ಮಂಡಳಿಯ ಹಲವಾರು ಪರೀಕ್ಷೆಗಳನ್ನು ನಡೆಸಿ ಯಾವುದೇ ಗೊಂದಲವಿಲ್ಲದೆ ಫಲಿತಾಂಶ ಪ್ರಕಟಿಸಿರುವುದು ಶ್ಲಾಘನೀಯ. ಕಳಂಕ / ವಿವಾದವಿಲ್ಲದೆ ಪರೀಕ್ಷೆ ಆಯೋಜಿಸಿ ಅಂಕಗಳನ್ನು ಪ್ರಕಟಿಸಿ ತದನಂತರ ಫಲಿತಾಂಶ,ಆಯ್ಕೆ ಪ್ರಕ್ರಿಯೆ ಸುಗಮವಾಗಿ ನಡೆಸುತ್ತದೆ ಕೆಇಎ. ಸದ್ಯ, ಒಳ ಮೀಸಲಾತಿ ಸಂಬಂಧ ಸಮಸ್ಯೆ ಬಗೆಹರಿದಿದ್ದು ರಾಜ್ಯದಲ್ಲಿ ಉದ್ಯೋಗದ ಸಮಸ್ಯೆಯನ್ನು ನೀಗಿಸುವ ದಿಸೆಯಲ್ಲಿ ೫೬,೦೦೦ ಹುದ್ದೆಗಳನ್ನು ಭರ್ತಿಗೊಳಿಸುವ ನಿರ್ಣಯವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಕ್ಕೆ ಬಂದ ಮೊದಲ ದಿನವೇ ಮಾಡಿದ್ದಾರೆ.

ಅಧಿಸೂಚನೆಯಾಗದೆ ದಣಿದು ಬಸವಳಿದ ಯುವ ಜನರಿಗೆ ಹುದ್ದೆ ಭರ್ತಿ ಸಂಬಂಧ ಸಿಎಂ ಉವಾಚವು ಕೇವಲ ಮಾತಾಗದೇ ಗ್ಯಾರಂಟಿ ಆದರೆ ಈ ಹೊತ್ತಿನಲ್ಲಿ ನಿಜಕ್ಕೂ ಯುವ ಜನತೆಗೆ ಟಾನಿಕ್ ಆಗಬಲ್ಲದು. ಇಂದು ಉಖಾರ್ಹ ವಿಷಯ: ಕೆಇಎ ಪರೀಕ್ಷೆ ನಡೆಸಿದ ಕೆಲವೇ ದಿನಗಳ ಅಂತರದಲ್ಲಿ ಪ್ರತಿಯೊಬ್ಬರ ಅಂಕಗಳನ್ನು ಪ್ರಕಟಿಸುತ್ತದೆ. ಆದರೆ, ಕೆಪಿಎಸ್‌ಸಿಯಿಂದ ಇವತ್ತಿನವರೆಗೂ ಅದು ಸಾಧ್ಯವಾಗಿಲ್ಲ ಏಕೆ? ಮೊನ್ನೆ ಪೊಲೀಸ್ ಕಾನ್ಸ್‌ಟೇಬಲ್‌ನ ೩ ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗಾಗಿನ ಜವಾಬ್ದಾರಿಯನ್ನು ಕೆಇಎಗೆ ನೀಡಿದ್ದು ಸ್ವಾಗತಾರ್ಹ. ಸಿಎಂ ಡಿ.ಕೆ. ಶಿವಕುಮಾರ್ ತಾವು ನುಡಿದಿರುವಂತೆ ೫೬ ಸಾವಿರ ಬೃಹತ್ ಹುದ್ದೆಗಳನ್ನು ಶತಾಯ ಗತಾಯ ತುಂಬಬೇಕಿದೆ. ಅರ್ಹ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಹುದ್ದೆ ನ್ಯಾಯಯುತವಾಗಿ ದೊರಕಲು ಪರೀಕ್ಷಾ ಜವಾಬ್ದಾರಿಯನ್ನು ಸಾಧ್ಯವಾದಷ್ಟು ಕೆಇಎ ಗೆ ನೀಡಲಿ. ಈ ಮೊದಲಿನಿಂದಲೂ, ರಾಜ್ಯದಲ್ಲಿ ಅಧಿಕಾರದಲ್ಲಿ ಯಾವುದೇ ಸರ್ಕಾರವಿದ್ದರೂ ಕೆಪಿಎಸ್‌ಸಿ ಭ್ರಷ್ಟಾಚಾರ, ಪಕ್ಷಪಾತ, ಲಂಚ, ರಾಜಕಾರಣಿಗಳ ಪ್ರಭಾವ ತಡೆಯಲು ಸಾಧ್ಯವೇ ಆಗುತ್ತಿಲ್ಲ. ಇದು ಇವತ್ತಿಗೂ ಅರ್ಥವಾಗದ ಮಿಲಿಯನ್ ಡಾಲರ್ ಪ್ರಶ್ನೆ! ಭವಿಷ್ಯದಲ್ಲಿ ನೇಮಕಾತಿ ಸಂಬಂಧ ಪ್ರತಿಯೊಂದು ಇಲಾಖಾ ಪರೀಕ್ಷೆಗಳ ಹೊಣೆಯನ್ನೂ ಕೆಇಎಗೆ ಕೊಡುವುದು ಸ್ಪರ್ಧಾ ಆಕಾಂಕ್ಷಿಗಳ ಹಿತ ದೃಷ್ಟಿಯಿಂದ ಒಳ್ಳೆಯದು.

– ಅನಿಲ್ ಕುಮಾರ್, ನಂಜನಗೂಡು

ಆಂದೋಲನ ಡೆಸ್ಕ್

Recent Posts

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 mins ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

2 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

5 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

5 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

5 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

5 hours ago