Categories: Andolana originals

ಓದುಗರ ಪತ್ರ: ಬ್ಯಾಂಕುಗಳಲ್ಲಿ ಸ್ಥಳೀಯರಿಗೆ ಆದ್ಯತೆ ಸಿಗಲಿ

ಸ್ಥಳೀಯ ಭಾಷೆಗಳ ಜ್ಞಾನವಿರುವವರನ್ನು ಮಾತ್ರ ಗ್ರಾಮೀಣ ಬ್ಯಾಂಕುಗಳಿಗೆ ನೇಮಕ ಮಾಡಿಕೊಳ್ಳಲು ಅನುಕೂಲವಾಗುವಂತೆ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (RRB)ಗಳ ನಿಯಮಗಳನ್ನು ಮಾರ್ಪಡಿಸುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ನಡೆದ ದಕ್ಷಿಣ ವಲಯದ ಹತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಕಾರ್ಯಕ್ಷಮತೆ ಪರಿಶೀಲನಾ ಸಭೆಯಲ್ಲಿ ಸೂಚನೆ ನೀಡಿರುವುದಾಗಿ ವರದಿಯಾಗಿದೆ.

ಅಭ್ಯರ್ಥಿಗಳಲ್ಲಿ ಸ್ಥಳೀಯ ಭಾಷೆಯ ಜ್ಞಾನ ಮತ್ತು ಪ್ರಾವೀಣ್ಯತೆ ಖಚಿತಪಡಿಸಿಕೊಳ್ಳಲು ನೇಮಕಾತಿ ನಿಯಮಗಳನ್ನು ಪರಿಶೀಲಿಸಿ ಅವುಗಳನ್ನು ಅನುಕೂಲಕ್ಕೆ ತಕ್ಕಂತೆ ಮಾರ್ಪಡಿಸಿಕೊಳ್ಳಲು ಹಣಕಾಸು ಸೇವೆಗಳ ಇಲಾಖೆಯಿಂದ ಆದೇಶ ನೀಡಲಾಗಿದೆ. ಈ ಕೆಲಸ ಎಂದೋ ಆಗಬೇಕಿತ್ತು. ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ಸದ್ಯ ಈಗಲಾದರೂ ಕ್ರಮ ತೆಗೆದುಕೊಂಡು ಸ್ಥಳೀಯ ಬ್ಯಾಂಕುಗಳಲ್ಲಿ ಸ್ಥಳೀಯ ಭಾಷಿಗರಿಗೆ ಆದ್ಯತೆ ನೀಡಬೇಕು ಎಂಬ ನಿಯಮ ಜಾರಿಗೆ ತರುತ್ತಿರುವುದು ಸ್ವಾಗತಾರ್ಹ. ಹಿಂದಿಯೇತರ ರಾಜ್ಯಗಳಲ್ಲಿ ಮುಖ್ಯವಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಈ ನಿಯಮ ಗ್ರಾಮೀಣ ಜನರಿಗೆ ಹೆಚ್ಚು ಅನುಕೂಲ ಮಾಡಿಕೊಡಲಿದೆ. ಅಲ್ಲದೆ ಅವರು ಬ್ಯಾಂಕ್ ವ್ಯವಹಾರವನ್ನು ಸುಲಭವಾಗಿ ಮಾಡಬಹುದಾಗಿದೆ. ಆದ್ದರಿಂದ ವಿತ್ತ ಸಚಿವರು ಇಂತಹ ನಿಯಮಗಳನ್ನು ಎಲ್ಲಾ ಬ್ಯಾಂಕುಗಳಿಗೂ ವಿಸ್ತರಿಸಲಿ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago