ಫ್ರಾನ್ಸ್ನ ರಾಜಧಾನಿ ಪ್ಯಾರಿಸ್ನಲ್ಲಿ 2024ರ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಿದ್ದು, ಕ್ರೀಡಾಕೂಟ ಪ್ರಾರಂಭಕ್ಕೂ ಮುನ್ನ ಕೆಲ ಆತಂಕವಾದಿಗಳು ಫ್ರಾನ್ಸ್ನ ರೈಲ್ವೆ ಇಲಾಖೆಗೆ ಸೇರಿದ ಆಸ್ತಿ-ಪಾಸ್ತಿಗಳಿಗೆ ಬೆಂಕಿ ಹಚ್ಚಿ ಆತಂಕ ಸೃಷ್ಟಿಸಿದ್ದಾರೆ.
ಈ ಕ್ರೀಡಾಕೂಟದಲ್ಲಿ ವಿಶ್ವದ ನಾನಾ ದೇಶಗಳ ಕ್ರೀಡಾಪಟುಗಳ ಜತೆಗೆ ಭಾರತದ 117 ಕ್ರೀಡಾಪಟುಗಳೂ ಭಾಗವಹಿಸಿದ್ದಾರೆ. ಆದರೆ ಫ್ರಾನ್ಸ್ನಲ್ಲಿ ನಡೆದ ಈ ದಾಳಿ ಕ್ರೀಡಾಪಟುಗಳಲ್ಲಿ ಆತಂಕ ಸೃಷ್ಟಿಸಿದೆ. ಸದ್ಯ ಈ ಕ್ರೀಡಾಪಟುಗಳು ತಂಗಿರುವ ಹೋಟೆಲ್ ಹಾಗೂ ಕ್ರೀಡೆಗಳು ನಡೆಯುವ ಕ್ರೀಡಾಂಗಣಗಳಿಗೆ ಬಿಗಿ ಬಂದೋಬಸ್ತ್ ಒದಗಿಸಿ ಬೇಕಿದೆ.
ಈ ಕ್ರೀಡಾಕೂಟವನ್ನು ವೀಕ್ಷಿಸಲು ವಿಶ್ವದ ವಿವಿಧ ದೇಶಗಳ ಲಕ್ಷಾಂತರ ಮಂದಿ ಫ್ರಾನ್ಸ್ಗೆ ಆಗಮಿಸಿದ್ದು, ಅವರ ರಕ್ಷಣೆಯ ಹೊಣೆಯೂ ಫ್ರಾನ್ಸ್ನ ಮೇಲಿದೆ. ಇನ್ನು ಭಾರತೀಯ ಕ್ರೀಡಾಪಟುಗಳಿಗೆ ರಕ್ಷಣೆ ನೀಡುವುದು ಫ್ರಾನ್ಸ್ ದೇಶದ ಕರ್ತವ್ಯ ಎಂದು ಸುಮ್ಮನಾಗದೆ ಪ್ರಧಾನಿ ನರೇಂದ್ರ ಮೋದಿಯವರು ವಿದೇಶಾಂಗ ಸಚಿವರೊಂದಿಗೆ ಚರ್ಚಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಭಾರತದ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚಿಸಬೇಕಿದೆ. ಅವರು ಯಾವುದೇ ಅಂಜಿಕೆ ಇಲ್ಲದೆ ಕ್ರೀಡಾಕೂಟದಲ್ಲಿ ಭಾಗವಹಿಸಿ ಸುರಕ್ಷಿತವಾಗಿ ದೇಶಕ್ಕೆ ಮರಳುವವರೆಗೂ ರಕ್ಷಣೆ ನೀಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…