Andolana originals

ಓದುಗರ ಪತ್ರ| ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಭದ್ರತೆ ಅಗತ್ಯ

ಫ್ರಾನ್ಸ್‌ನ ರಾಜಧಾನಿ ಪ್ಯಾರಿಸ್‌ನಲ್ಲಿ 2024ರ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಿದ್ದು, ಕ್ರೀಡಾಕೂಟ ಪ್ರಾರಂಭಕ್ಕೂ ಮುನ್ನ ಕೆಲ ಆತಂಕವಾದಿಗಳು ಫ್ರಾನ್ಸ್‌ನ ರೈಲ್ವೆ ಇಲಾಖೆಗೆ ಸೇರಿದ ಆಸ್ತಿ-ಪಾಸ್ತಿಗಳಿಗೆ ಬೆಂಕಿ ಹಚ್ಚಿ ಆತಂಕ ಸೃಷ್ಟಿಸಿದ್ದಾರೆ.

ಈ ಕ್ರೀಡಾಕೂಟದಲ್ಲಿ ವಿಶ್ವದ ನಾನಾ ದೇಶಗಳ ಕ್ರೀಡಾಪಟುಗಳ ಜತೆಗೆ ಭಾರತದ 117 ಕ್ರೀಡಾಪಟುಗಳೂ ಭಾಗವಹಿಸಿದ್ದಾರೆ. ಆದರೆ ಫ್ರಾನ್ಸ್‌ನಲ್ಲಿ ನಡೆದ ಈ ದಾಳಿ ಕ್ರೀಡಾಪಟುಗಳಲ್ಲಿ ಆತಂಕ ಸೃಷ್ಟಿಸಿದೆ. ಸದ್ಯ ಈ ಕ್ರೀಡಾಪಟುಗಳು ತಂಗಿರುವ ಹೋಟೆಲ್ ಹಾಗೂ ಕ್ರೀಡೆಗಳು ನಡೆಯುವ ಕ್ರೀಡಾಂಗಣಗಳಿಗೆ ಬಿಗಿ ಬಂದೋಬಸ್ತ್ ಒದಗಿಸಿ ಬೇಕಿದೆ.

ಈ ಕ್ರೀಡಾಕೂಟವನ್ನು ವೀಕ್ಷಿಸಲು ವಿಶ್ವದ ವಿವಿಧ ದೇಶಗಳ ಲಕ್ಷಾಂತರ ಮಂದಿ ಫ್ರಾನ್ಸ್‌ಗೆ ಆಗಮಿಸಿದ್ದು, ಅವರ ರಕ್ಷಣೆಯ ಹೊಣೆಯೂ ಫ್ರಾನ್ಸ್‌ನ ಮೇಲಿದೆ. ಇನ್ನು ಭಾರತೀಯ ಕ್ರೀಡಾಪಟುಗಳಿಗೆ ರಕ್ಷಣೆ ನೀಡುವುದು ಫ್ರಾನ್ಸ್ ದೇಶದ ಕರ್ತವ್ಯ ಎಂದು ಸುಮ್ಮನಾಗದೆ ಪ್ರಧಾನಿ ನರೇಂದ್ರ ಮೋದಿಯವರು ವಿದೇಶಾಂಗ ಸಚಿವರೊಂದಿಗೆ ಚರ್ಚಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಭಾರತದ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚಿಸಬೇಕಿದೆ. ಅವರು ಯಾವುದೇ ಅಂಜಿಕೆ ಇಲ್ಲದೆ ಕ್ರೀಡಾಕೂಟದಲ್ಲಿ ಭಾಗವಹಿಸಿ ಸುರಕ್ಷಿತವಾಗಿ ದೇಶಕ್ಕೆ ಮರಳುವವರೆಗೂ ರಕ್ಷಣೆ ನೀಡಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

8 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

8 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

8 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

9 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

9 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

9 hours ago