ಫ್ರಾನ್ಸ್ನ ರಾಜಧಾನಿ ಪ್ಯಾರಿಸ್ನಲ್ಲಿ 2024ರ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಿದ್ದು, ಕ್ರೀಡಾಕೂಟ ಪ್ರಾರಂಭಕ್ಕೂ ಮುನ್ನ ಕೆಲ ಆತಂಕವಾದಿಗಳು ಫ್ರಾನ್ಸ್ನ ರೈಲ್ವೆ ಇಲಾಖೆಗೆ ಸೇರಿದ ಆಸ್ತಿ-ಪಾಸ್ತಿಗಳಿಗೆ ಬೆಂಕಿ ಹಚ್ಚಿ ಆತಂಕ ಸೃಷ್ಟಿಸಿದ್ದಾರೆ.
ಈ ಕ್ರೀಡಾಕೂಟದಲ್ಲಿ ವಿಶ್ವದ ನಾನಾ ದೇಶಗಳ ಕ್ರೀಡಾಪಟುಗಳ ಜತೆಗೆ ಭಾರತದ 117 ಕ್ರೀಡಾಪಟುಗಳೂ ಭಾಗವಹಿಸಿದ್ದಾರೆ. ಆದರೆ ಫ್ರಾನ್ಸ್ನಲ್ಲಿ ನಡೆದ ಈ ದಾಳಿ ಕ್ರೀಡಾಪಟುಗಳಲ್ಲಿ ಆತಂಕ ಸೃಷ್ಟಿಸಿದೆ. ಸದ್ಯ ಈ ಕ್ರೀಡಾಪಟುಗಳು ತಂಗಿರುವ ಹೋಟೆಲ್ ಹಾಗೂ ಕ್ರೀಡೆಗಳು ನಡೆಯುವ ಕ್ರೀಡಾಂಗಣಗಳಿಗೆ ಬಿಗಿ ಬಂದೋಬಸ್ತ್ ಒದಗಿಸಿ ಬೇಕಿದೆ.
ಈ ಕ್ರೀಡಾಕೂಟವನ್ನು ವೀಕ್ಷಿಸಲು ವಿಶ್ವದ ವಿವಿಧ ದೇಶಗಳ ಲಕ್ಷಾಂತರ ಮಂದಿ ಫ್ರಾನ್ಸ್ಗೆ ಆಗಮಿಸಿದ್ದು, ಅವರ ರಕ್ಷಣೆಯ ಹೊಣೆಯೂ ಫ್ರಾನ್ಸ್ನ ಮೇಲಿದೆ. ಇನ್ನು ಭಾರತೀಯ ಕ್ರೀಡಾಪಟುಗಳಿಗೆ ರಕ್ಷಣೆ ನೀಡುವುದು ಫ್ರಾನ್ಸ್ ದೇಶದ ಕರ್ತವ್ಯ ಎಂದು ಸುಮ್ಮನಾಗದೆ ಪ್ರಧಾನಿ ನರೇಂದ್ರ ಮೋದಿಯವರು ವಿದೇಶಾಂಗ ಸಚಿವರೊಂದಿಗೆ ಚರ್ಚಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಭಾರತದ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚಿಸಬೇಕಿದೆ. ಅವರು ಯಾವುದೇ ಅಂಜಿಕೆ ಇಲ್ಲದೆ ಕ್ರೀಡಾಕೂಟದಲ್ಲಿ ಭಾಗವಹಿಸಿ ಸುರಕ್ಷಿತವಾಗಿ ದೇಶಕ್ಕೆ ಮರಳುವವರೆಗೂ ರಕ್ಷಣೆ ನೀಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…