Categories: Andolana originals

ಓದುಗರ ಪತ್ರ: ಆಂಬ್ಯುಲೆನ್ಸ್ ಸಿಬ್ಬಂದಿಗೆ ವೇತನ ನೀಡಿ

108 ಅಂಬ್ಯುಲೆನ್ಸ್ ಸಿಬ್ಬಂದಿಗಳು ಕಳೆದ 3-4 ತಿಂಗಳುಗಳಿಂದ ವೇತನವಿಲ್ಲದೇ ಕುಟುಂಬ ನಿರ್ವಹಣೆ ಮಾಡಲಾಗದೇ ಪರದಾಡುವಂತಾಗಿದ್ದು, ಸರ್ಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದಾರೆ.

ನ.15ರ ರಾತ್ರಿ 8.00 ಗಂಟೆಯ ಒಳಗೆ ವೇತನ ನೀಡದೇ ಹೋದಲ್ಲಿ ಕೆಲಸಕ್ಕೆ ಗೈರಾಗಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವುದಾಗಿಯೂ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಆರೋಗ್ಯ ಕವಚ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ 108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಸಮಯಕ್ಕೆ ತಕ್ಕಂತೆ ವೇತನ ನೀಡಬೇಕಾದದ್ದು ಸರ್ಕಾರದ ಕರ್ತವ್ಯ. ಆದರೆ ಸರ್ಕಾರ ಪ್ರತಿ ಬಾರಿಯೂ ತಡವಾಗಿಯೇ ವೇತನ ನೀಡುತ್ತಿದ್ದು, 108 ಆಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ತಮ್ಮ ಕುಟುಂಬಗಳನ್ನೂ ಬಿಟ್ಟು ಹಗಲು-ರಾತ್ರಿ ಎನ್ನದೆ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಸಿಬ್ಬಂದಿಗಳ ವೇತನವನ್ನು ತಿಂಗಳುಗಟ್ಟಲೆ ತಡೆಹಿಡಿದರೆ ಅವರು ಕುಟುಂಬ ನಿರ್ವಹಣೆ ಮಾಡುವುದಾದರೂ ಹೇಗೆ? ಇದಿಷ್ಟೇ ಅಲ್ಲದೆ ಇವರಿಗೆ ಹತ್ತಾರು ಸಮಸ್ಯೆಗಳಿದ್ದು, ಅವುಗಳನ್ನೂ ನಿವಾರಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಸಂಬಂಧಪಟ್ಟವರಿಗೆ ಸರಿಯಾದ ಸಮಯಕ್ಕೆ ವೇತನ ನೀಡುವಂತೆ ಸೂಚನೆ ನೀಡಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾಲ್ಲೂಕು.

andolana

Recent Posts

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

4 mins ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

21 mins ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

26 mins ago

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಬಳಿ ನಡೆದಿದೆ. ರಶ್ಮಿ…

47 mins ago

ಫೋನ್‌ ಕದ್ದಾಲಿಕೆ ಅವಶ್ಯಕತೆ ಏನಿದೆ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

ರಾಮನಗರ: ಕಾಂಗ್ರೆಸ್‌ ಸರ್ಕಾರದಲ್ಲಿ ಫೋನ್‌ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

58 mins ago

ಗಂಗಾ ಕಲ್ಯಾಣ ಪೋರ್ಟಲ್‌ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ…

1 hour ago