108 ಅಂಬ್ಯುಲೆನ್ಸ್ ಸಿಬ್ಬಂದಿಗಳು ಕಳೆದ 3-4 ತಿಂಗಳುಗಳಿಂದ ವೇತನವಿಲ್ಲದೇ ಕುಟುಂಬ ನಿರ್ವಹಣೆ ಮಾಡಲಾಗದೇ ಪರದಾಡುವಂತಾಗಿದ್ದು, ಸರ್ಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದಾರೆ.
ನ.15ರ ರಾತ್ರಿ 8.00 ಗಂಟೆಯ ಒಳಗೆ ವೇತನ ನೀಡದೇ ಹೋದಲ್ಲಿ ಕೆಲಸಕ್ಕೆ ಗೈರಾಗಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವುದಾಗಿಯೂ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಆರೋಗ್ಯ ಕವಚ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ 108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಸಮಯಕ್ಕೆ ತಕ್ಕಂತೆ ವೇತನ ನೀಡಬೇಕಾದದ್ದು ಸರ್ಕಾರದ ಕರ್ತವ್ಯ. ಆದರೆ ಸರ್ಕಾರ ಪ್ರತಿ ಬಾರಿಯೂ ತಡವಾಗಿಯೇ ವೇತನ ನೀಡುತ್ತಿದ್ದು, 108 ಆಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ತಮ್ಮ ಕುಟುಂಬಗಳನ್ನೂ ಬಿಟ್ಟು ಹಗಲು-ರಾತ್ರಿ ಎನ್ನದೆ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಸಿಬ್ಬಂದಿಗಳ ವೇತನವನ್ನು ತಿಂಗಳುಗಟ್ಟಲೆ ತಡೆಹಿಡಿದರೆ ಅವರು ಕುಟುಂಬ ನಿರ್ವಹಣೆ ಮಾಡುವುದಾದರೂ ಹೇಗೆ? ಇದಿಷ್ಟೇ ಅಲ್ಲದೆ ಇವರಿಗೆ ಹತ್ತಾರು ಸಮಸ್ಯೆಗಳಿದ್ದು, ಅವುಗಳನ್ನೂ ನಿವಾರಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಸಂಬಂಧಪಟ್ಟವರಿಗೆ ಸರಿಯಾದ ಸಮಯಕ್ಕೆ ವೇತನ ನೀಡುವಂತೆ ಸೂಚನೆ ನೀಡಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾಲ್ಲೂಕು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…