Andolana originals

ಓದುಗರ ಪತ್ರ| ಸರಗೂರಿಗೆ ವಿಶೇಷ ಪ್ಯಾಕೇಜ್ ನೀಡಿ

2013ರಲ್ಲಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನಿಂದ ಬೇರ್ಪಡಿಸಿ ನೂತನ ತಾಲ್ಲೂಕಾಗಿ ಸರಗೂರನ್ನು ಘೋಷಿಸಿದರು.

ಸರಗೂರು ತಾಲ್ಲೂಕು ಕೇಂದ್ರವಾಗಿ ಒಂಬತ್ತು ವರ್ಷಗಳೇ ಕಳೆದಿದ್ದರೂ ಒಂದು ಪರಿಪೂರ್ಣ ತಾಲ್ಲೂಕ್ಕಾಗಿ ರೂಪುಗೊಂಡಿಲ್ಲ. ಅಲ್ಲದೆ ಸರಗೂರಿನಲ್ಲಿ ಒಂದು ತಾಲ್ಲೂಕಿನಲ್ಲಿ ಇರಬೇಕಾದ ಅಧಿಕಾರಿ ವರ್ಗವಿಲ್ಲ. ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿಯೂ ಮೂಲಸೌಕರ್ಯ ಕೊರತೆ ತಾಂಡವವಾಡುತ್ತಿದೆ. ಇನ್ನು ತಾಲ್ಲೂಕಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳೂ ಸರಿಯಾದ ಸಮಯಕ್ಕೆ ಕಚೇರಿಗೆ ಬರುವುದಿಲ್ಲ.

ಸರಗೂರು ತಾಲ್ಲೂಕು ಆಗಿದ್ದರೂ ಇಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸೇರಿದಂತೆ ಅನೇಕ ಇಲಾಖೆಗಳೇ ಇಲ್ಲದೆ ಜನರು ಎಲ್ಲ ಕೆಲಸ ಕಾರ್ಯಗಳಿಗೂ ಎಚ್.ಡಿ. ಕೋಟೆಗೆ ಅಲೆಯಬೇಕಾಗಿದೆ. ಹೀಗಾದರೆ ತಾಲ್ಲೂಕು ಅಭಿವೃದ್ದಿ ಯಾಗುವುದಾದರೂ ಹೇಗೆ? ಪ್ರಸ್ತುತ ಸಿದ್ದರಾಮಯ್ಯನವರೇ ಮುಖ್ಯ ಮಂತ್ರಿಯಾಗಿದ್ದು, ತಾವೇ ಘೋಷಿಸಿದ ಸರಗೂರು ತಾಲ್ಲೂಕಿಗೆ ವಿಶೇಷ ಪ್ಯಾಕೇಜ್ ನೀಡಿ ಅಭಿವೃದ್ಧಿ ಮಾಡಬೇಕಿದೆ.

-ಸಿ.ನಿಂಗರಾಜು, ಹಳೇಹೆಗ್ಗುಡಿಲು, ಸರಗೂರು ತಾ.

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago