2013ರಲ್ಲಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನಿಂದ ಬೇರ್ಪಡಿಸಿ ನೂತನ ತಾಲ್ಲೂಕಾಗಿ ಸರಗೂರನ್ನು ಘೋಷಿಸಿದರು.
ಸರಗೂರು ತಾಲ್ಲೂಕು ಕೇಂದ್ರವಾಗಿ ಒಂಬತ್ತು ವರ್ಷಗಳೇ ಕಳೆದಿದ್ದರೂ ಒಂದು ಪರಿಪೂರ್ಣ ತಾಲ್ಲೂಕ್ಕಾಗಿ ರೂಪುಗೊಂಡಿಲ್ಲ. ಅಲ್ಲದೆ ಸರಗೂರಿನಲ್ಲಿ ಒಂದು ತಾಲ್ಲೂಕಿನಲ್ಲಿ ಇರಬೇಕಾದ ಅಧಿಕಾರಿ ವರ್ಗವಿಲ್ಲ. ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿಯೂ ಮೂಲಸೌಕರ್ಯ ಕೊರತೆ ತಾಂಡವವಾಡುತ್ತಿದೆ. ಇನ್ನು ತಾಲ್ಲೂಕಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳೂ ಸರಿಯಾದ ಸಮಯಕ್ಕೆ ಕಚೇರಿಗೆ ಬರುವುದಿಲ್ಲ.
ಸರಗೂರು ತಾಲ್ಲೂಕು ಆಗಿದ್ದರೂ ಇಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸೇರಿದಂತೆ ಅನೇಕ ಇಲಾಖೆಗಳೇ ಇಲ್ಲದೆ ಜನರು ಎಲ್ಲ ಕೆಲಸ ಕಾರ್ಯಗಳಿಗೂ ಎಚ್.ಡಿ. ಕೋಟೆಗೆ ಅಲೆಯಬೇಕಾಗಿದೆ. ಹೀಗಾದರೆ ತಾಲ್ಲೂಕು ಅಭಿವೃದ್ದಿ ಯಾಗುವುದಾದರೂ ಹೇಗೆ? ಪ್ರಸ್ತುತ ಸಿದ್ದರಾಮಯ್ಯನವರೇ ಮುಖ್ಯ ಮಂತ್ರಿಯಾಗಿದ್ದು, ತಾವೇ ಘೋಷಿಸಿದ ಸರಗೂರು ತಾಲ್ಲೂಕಿಗೆ ವಿಶೇಷ ಪ್ಯಾಕೇಜ್ ನೀಡಿ ಅಭಿವೃದ್ಧಿ ಮಾಡಬೇಕಿದೆ.
-ಸಿ.ನಿಂಗರಾಜು, ಹಳೇಹೆಗ್ಗುಡಿಲು, ಸರಗೂರು ತಾ.
ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…