2013ರಲ್ಲಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನಿಂದ ಬೇರ್ಪಡಿಸಿ ನೂತನ ತಾಲ್ಲೂಕಾಗಿ ಸರಗೂರನ್ನು ಘೋಷಿಸಿದರು.
ಸರಗೂರು ತಾಲ್ಲೂಕು ಕೇಂದ್ರವಾಗಿ ಒಂಬತ್ತು ವರ್ಷಗಳೇ ಕಳೆದಿದ್ದರೂ ಒಂದು ಪರಿಪೂರ್ಣ ತಾಲ್ಲೂಕ್ಕಾಗಿ ರೂಪುಗೊಂಡಿಲ್ಲ. ಅಲ್ಲದೆ ಸರಗೂರಿನಲ್ಲಿ ಒಂದು ತಾಲ್ಲೂಕಿನಲ್ಲಿ ಇರಬೇಕಾದ ಅಧಿಕಾರಿ ವರ್ಗವಿಲ್ಲ. ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿಯೂ ಮೂಲಸೌಕರ್ಯ ಕೊರತೆ ತಾಂಡವವಾಡುತ್ತಿದೆ. ಇನ್ನು ತಾಲ್ಲೂಕಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳೂ ಸರಿಯಾದ ಸಮಯಕ್ಕೆ ಕಚೇರಿಗೆ ಬರುವುದಿಲ್ಲ.
ಸರಗೂರು ತಾಲ್ಲೂಕು ಆಗಿದ್ದರೂ ಇಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸೇರಿದಂತೆ ಅನೇಕ ಇಲಾಖೆಗಳೇ ಇಲ್ಲದೆ ಜನರು ಎಲ್ಲ ಕೆಲಸ ಕಾರ್ಯಗಳಿಗೂ ಎಚ್.ಡಿ. ಕೋಟೆಗೆ ಅಲೆಯಬೇಕಾಗಿದೆ. ಹೀಗಾದರೆ ತಾಲ್ಲೂಕು ಅಭಿವೃದ್ದಿ ಯಾಗುವುದಾದರೂ ಹೇಗೆ? ಪ್ರಸ್ತುತ ಸಿದ್ದರಾಮಯ್ಯನವರೇ ಮುಖ್ಯ ಮಂತ್ರಿಯಾಗಿದ್ದು, ತಾವೇ ಘೋಷಿಸಿದ ಸರಗೂರು ತಾಲ್ಲೂಕಿಗೆ ವಿಶೇಷ ಪ್ಯಾಕೇಜ್ ನೀಡಿ ಅಭಿವೃದ್ಧಿ ಮಾಡಬೇಕಿದೆ.
-ಸಿ.ನಿಂಗರಾಜು, ಹಳೇಹೆಗ್ಗುಡಿಲು, ಸರಗೂರು ತಾ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…