2013ರಲ್ಲಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನಿಂದ ಬೇರ್ಪಡಿಸಿ ನೂತನ ತಾಲ್ಲೂಕಾಗಿ ಸರಗೂರನ್ನು ಘೋಷಿಸಿದರು.
ಸರಗೂರು ತಾಲ್ಲೂಕು ಕೇಂದ್ರವಾಗಿ ಒಂಬತ್ತು ವರ್ಷಗಳೇ ಕಳೆದಿದ್ದರೂ ಒಂದು ಪರಿಪೂರ್ಣ ತಾಲ್ಲೂಕ್ಕಾಗಿ ರೂಪುಗೊಂಡಿಲ್ಲ. ಅಲ್ಲದೆ ಸರಗೂರಿನಲ್ಲಿ ಒಂದು ತಾಲ್ಲೂಕಿನಲ್ಲಿ ಇರಬೇಕಾದ ಅಧಿಕಾರಿ ವರ್ಗವಿಲ್ಲ. ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿಯೂ ಮೂಲಸೌಕರ್ಯ ಕೊರತೆ ತಾಂಡವವಾಡುತ್ತಿದೆ. ಇನ್ನು ತಾಲ್ಲೂಕಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳೂ ಸರಿಯಾದ ಸಮಯಕ್ಕೆ ಕಚೇರಿಗೆ ಬರುವುದಿಲ್ಲ.
ಸರಗೂರು ತಾಲ್ಲೂಕು ಆಗಿದ್ದರೂ ಇಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸೇರಿದಂತೆ ಅನೇಕ ಇಲಾಖೆಗಳೇ ಇಲ್ಲದೆ ಜನರು ಎಲ್ಲ ಕೆಲಸ ಕಾರ್ಯಗಳಿಗೂ ಎಚ್.ಡಿ. ಕೋಟೆಗೆ ಅಲೆಯಬೇಕಾಗಿದೆ. ಹೀಗಾದರೆ ತಾಲ್ಲೂಕು ಅಭಿವೃದ್ದಿ ಯಾಗುವುದಾದರೂ ಹೇಗೆ? ಪ್ರಸ್ತುತ ಸಿದ್ದರಾಮಯ್ಯನವರೇ ಮುಖ್ಯ ಮಂತ್ರಿಯಾಗಿದ್ದು, ತಾವೇ ಘೋಷಿಸಿದ ಸರಗೂರು ತಾಲ್ಲೂಕಿಗೆ ವಿಶೇಷ ಪ್ಯಾಕೇಜ್ ನೀಡಿ ಅಭಿವೃದ್ಧಿ ಮಾಡಬೇಕಿದೆ.
-ಸಿ.ನಿಂಗರಾಜು, ಹಳೇಹೆಗ್ಗುಡಿಲು, ಸರಗೂರು ತಾ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…