2013ರಲ್ಲಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನಿಂದ ಬೇರ್ಪಡಿಸಿ ನೂತನ ತಾಲ್ಲೂಕಾಗಿ ಸರಗೂರನ್ನು ಘೋಷಿಸಿದರು.
ಸರಗೂರು ತಾಲ್ಲೂಕು ಕೇಂದ್ರವಾಗಿ ಒಂಬತ್ತು ವರ್ಷಗಳೇ ಕಳೆದಿದ್ದರೂ ಒಂದು ಪರಿಪೂರ್ಣ ತಾಲ್ಲೂಕ್ಕಾಗಿ ರೂಪುಗೊಂಡಿಲ್ಲ. ಅಲ್ಲದೆ ಸರಗೂರಿನಲ್ಲಿ ಒಂದು ತಾಲ್ಲೂಕಿನಲ್ಲಿ ಇರಬೇಕಾದ ಅಧಿಕಾರಿ ವರ್ಗವಿಲ್ಲ. ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿಯೂ ಮೂಲಸೌಕರ್ಯ ಕೊರತೆ ತಾಂಡವವಾಡುತ್ತಿದೆ. ಇನ್ನು ತಾಲ್ಲೂಕಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳೂ ಸರಿಯಾದ ಸಮಯಕ್ಕೆ ಕಚೇರಿಗೆ ಬರುವುದಿಲ್ಲ.
ಸರಗೂರು ತಾಲ್ಲೂಕು ಆಗಿದ್ದರೂ ಇಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸೇರಿದಂತೆ ಅನೇಕ ಇಲಾಖೆಗಳೇ ಇಲ್ಲದೆ ಜನರು ಎಲ್ಲ ಕೆಲಸ ಕಾರ್ಯಗಳಿಗೂ ಎಚ್.ಡಿ. ಕೋಟೆಗೆ ಅಲೆಯಬೇಕಾಗಿದೆ. ಹೀಗಾದರೆ ತಾಲ್ಲೂಕು ಅಭಿವೃದ್ದಿ ಯಾಗುವುದಾದರೂ ಹೇಗೆ? ಪ್ರಸ್ತುತ ಸಿದ್ದರಾಮಯ್ಯನವರೇ ಮುಖ್ಯ ಮಂತ್ರಿಯಾಗಿದ್ದು, ತಾವೇ ಘೋಷಿಸಿದ ಸರಗೂರು ತಾಲ್ಲೂಕಿಗೆ ವಿಶೇಷ ಪ್ಯಾಕೇಜ್ ನೀಡಿ ಅಭಿವೃದ್ಧಿ ಮಾಡಬೇಕಿದೆ.
-ಸಿ.ನಿಂಗರಾಜು, ಹಳೇಹೆಗ್ಗುಡಿಲು, ಸರಗೂರು ತಾ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…