2013ರಲ್ಲಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನಿಂದ ಬೇರ್ಪಡಿಸಿ ನೂತನ ತಾಲ್ಲೂಕಾಗಿ ಸರಗೂರನ್ನು ಘೋಷಿಸಿದರು.
ಸರಗೂರು ತಾಲ್ಲೂಕು ಕೇಂದ್ರವಾಗಿ ಒಂಬತ್ತು ವರ್ಷಗಳೇ ಕಳೆದಿದ್ದರೂ ಒಂದು ಪರಿಪೂರ್ಣ ತಾಲ್ಲೂಕ್ಕಾಗಿ ರೂಪುಗೊಂಡಿಲ್ಲ. ಅಲ್ಲದೆ ಸರಗೂರಿನಲ್ಲಿ ಒಂದು ತಾಲ್ಲೂಕಿನಲ್ಲಿ ಇರಬೇಕಾದ ಅಧಿಕಾರಿ ವರ್ಗವಿಲ್ಲ. ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿಯೂ ಮೂಲಸೌಕರ್ಯ ಕೊರತೆ ತಾಂಡವವಾಡುತ್ತಿದೆ. ಇನ್ನು ತಾಲ್ಲೂಕಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳೂ ಸರಿಯಾದ ಸಮಯಕ್ಕೆ ಕಚೇರಿಗೆ ಬರುವುದಿಲ್ಲ.
ಸರಗೂರು ತಾಲ್ಲೂಕು ಆಗಿದ್ದರೂ ಇಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸೇರಿದಂತೆ ಅನೇಕ ಇಲಾಖೆಗಳೇ ಇಲ್ಲದೆ ಜನರು ಎಲ್ಲ ಕೆಲಸ ಕಾರ್ಯಗಳಿಗೂ ಎಚ್.ಡಿ. ಕೋಟೆಗೆ ಅಲೆಯಬೇಕಾಗಿದೆ. ಹೀಗಾದರೆ ತಾಲ್ಲೂಕು ಅಭಿವೃದ್ದಿ ಯಾಗುವುದಾದರೂ ಹೇಗೆ? ಪ್ರಸ್ತುತ ಸಿದ್ದರಾಮಯ್ಯನವರೇ ಮುಖ್ಯ ಮಂತ್ರಿಯಾಗಿದ್ದು, ತಾವೇ ಘೋಷಿಸಿದ ಸರಗೂರು ತಾಲ್ಲೂಕಿಗೆ ವಿಶೇಷ ಪ್ಯಾಕೇಜ್ ನೀಡಿ ಅಭಿವೃದ್ಧಿ ಮಾಡಬೇಕಿದೆ.
-ಸಿ.ನಿಂಗರಾಜು, ಹಳೇಹೆಗ್ಗುಡಿಲು, ಸರಗೂರು ತಾ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…