ಓದುಗರ ಪತ್ರ
ಮೇಕೆದಾಟು ಯೋಜನೆಯ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿರುವುದು , ಕರ್ನಾಟಕದ ಜನತೆಗೆ ಸಂದ ಜಯವೆಂದೇ ಹೇಳಬೇಕು. ಅದರಲ್ಲೂ ಮುಖ್ಯವಾಗಿ ಬೆಂಗಳೂರು ಜನರಿಗೆ ಶಾಶ್ವತವಾಗಿ ಕುಡಿಯುವ ನೀರಿಗೆತೊಂದರೆ ಇಲ್ಲದಂತಾಗುತ್ತದೆ.
ಯಾವುದೇ ರಾಜಕೀಯ ಪಕ್ಷವೂ ಇದರಲ್ಲಿ ರಾಜಕಾರಣ ಮಾಡದೆ ರಾಜ್ಯಕ್ಕೆ ದೊರೆತಿರುವ ಈ ಅಪೂರ್ವ ಗೆಲುವನ್ನು ತುಂಬು ಹೃದಯದಿಂದ ಸ್ವಾಗತಿಸ ಬೇಕು . ತಮಿಳುನಾಡು ಸರ್ಕಾರ ಮತ್ತೆ ಕ್ಯಾತೆ ತೆಗೆದು ನ್ಯಾಯಾಲಯಕ್ಕೆ ಮೆಲ್ಮನವಿ ಸಲ್ಲಿಸಲು ಅವಕಾಶ ನೀಡದೆ ರಾಜ್ಯ ಸರ್ಕಾರವು ಈ ಕೂಡಲೇ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು. ಯಾವುದೇ ಅಡೆ ತಡೆ ಇಲ್ಲದೆ ಈ ಯೋಜನೆ ಪೂರ್ಣಗೊಳ್ಳಲಿ ಎಂಬುದೇ ರಾಜ್ಯದ ಜನರ ಆಶಯವಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…