Andolana originals

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ ಇಲಾಖೆಯು ರೈತರು ಮತ್ತು ಸಣ್ಣ ವ್ಯಾಪಾರಿಗಳಿಂದ ನೇರಳೆ ಬೀಜಗಳನ್ನು ನ್ಯಾಯಯುತ ಬೆಲೆಗೆ ನೇರವಾಗಿ ಖರೀದಿಸಲು ಗ್ರಾಮೀಣ ಭಾಗಗಳಲ್ಲಿ ಅಧಿಕೃತ ಸಂಗ್ರಹಣಾ ಕೇಂದ್ರಗಳನ್ನು ಸ್ಥಾಪಿಸಬೇಕು. ಇವುಗಳಲ್ಲಿನ ಔಷಧಿಯ ಗುಣಗಳಿಂದಾಗಿ ಮಧುಮೇಹ ನಿಯಂತ್ರಣಕ್ಕೆ ದೇಶೀಯವಾಗಿ ಗುಣಮಟ್ಟದ ನೇರಳೆ ಬೀಜದ ಪುಡಿ ತಯಾರಿಸಲು ಸಣ್ಣ ಕೈಗಾರಿಕೆಗಳಿಗೆ ಸರ್ಕಾರವು ಆರ್ಥಿಕ ಸಹಾಯ, ಸಬ್ಸಿಡಿ ಮತ್ತು ತಾಂತ್ರಿಕ ತರಬೇತಿ ನೀಡಬೇಕು. ಆಯುಷ್ ಸಚಿವಾಲಯದ ಮೂಲಕ ಜಾಗತಿಕ ಮಾರುಕಟ್ಟೆಗೆ ಇದರ ರಫ್ತು ಮಾಡಲು ಉತ್ತೇಜಿಸಬೇಕು. ಅಲ್ಲದೆ ಕೇವಲ ೩ ರಿಂದ ೪ ವರ್ಷಗಳಲ್ಲಿ ಉತ್ತಮ ಇಳುವರಿ ನೀಡುವ ಸುಧಾರಿತ ಕಸಿ ಸಸಿಗಳನ್ನು ಉಚಿತವಾಗಿ ವಿತರಿಸುವ ಮೂಲಕ ಸರ್ಕಾರವು ರೈತರ ಆದಾಯವನ್ನು ದ್ವಿಗುಣಗೊಳಿಸಬಹುದಾಗಿದೆ.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago