ಓದುಗರ ಪತ್ರ
ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ‘ಜೆಮಿನಿ ಸರ್ಕಸ್’ ಪ್ರಾರಂಭಗೊಂಡಿದೆ. ದೇಶದ ಸರ್ಕಸ್ ಕಂಪೆನಿಗಳ ಇತಿಹಾಸದಲ್ಲಿ ‘ಜೆಮಿನಿ’ ಸರ್ಕಸ್ಗೆ ತನ್ನದೇ ಆದ ಭವ್ಯ ಇತಿಹಾಸವಿದೆ. ದೇಶದ ಉದ್ದಗಲಕ್ಕೂ ಚಿರಪರಿಚಿತವಾಗಿರುವ ಈ ಕಂಪೆನಿಯ ಅತ್ಯಾಕರ್ಷಕ ಪ್ರದರ್ಶನಗಳು ಪ್ರೇಕ್ಷಕರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತವೆ.
ಪ್ರಾಣಿ ದಯಾ ಸಂಘದವರ ಮಧ್ಯ ಪ್ರವೇಶದಿಂದ ಪ್ರಾಣಿಗಳನ್ನು ಸರ್ಕಸ್ನಲ್ಲಿ ಬಳಸುವುದನ್ನು ಸುಪ್ರೀಂ ಕೋರ್ಟ್ ನಿಷೇಧಿಸಿರುವುದರಿಂದ, ಸರ್ಕಸ್ ಕಂಪನಿಗಳು ಅವನತಿಯತ್ತ ಸಾಗಿವೆ. ದೇಶದಲ್ಲಿ ಜೆಮಿನಿ ಸರ್ಕಸ್ ಸೇರಿದಂತೆ ಕೆಲವು ಸರ್ಕಸ್ ಕಂಪನಿಗಳು ಮಾತ್ರ ಉಳಿದುಕೊಂಡಿವೆ ಎಂದು ಹೇಳಲಾಗಿದೆ.
ಈ ಕಂಪನಿಗಳನ್ನೇ ನಂಬಿಕೊಂಡು ಬದುಕುತ್ತಿರುವ ನೂರಾರು ಮಂದಿ ನೌಕರರಿಗೆ, ಇದುವೇ ಜೀವನಾಧಾರವಾಗಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂತಹ ಸರ್ಕಸ್ ಕಂಪನಿಗಳ ನೆರವಿಗೆ ಬರುವುದು ಅಗತ್ಯವಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…