Andolana originals

ಓದುಗರ ಪತ್ರ: ಸರ್ಕಸ್ ಕಂಪನಿಗಳಿಗೆ ಸರ್ಕಾರದ ನೆರವು ಅಗತ್ಯ

ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ‘ಜೆಮಿನಿ ಸರ್ಕಸ್’ ಪ್ರಾರಂಭಗೊಂಡಿದೆ. ದೇಶದ ಸರ್ಕಸ್ ಕಂಪೆನಿಗಳ ಇತಿಹಾಸದಲ್ಲಿ ‘ಜೆಮಿನಿ’ ಸರ್ಕಸ್‌ಗೆ ತನ್ನದೇ ಆದ ಭವ್ಯ ಇತಿಹಾಸವಿದೆ. ದೇಶದ ಉದ್ದಗಲಕ್ಕೂ ಚಿರಪರಿಚಿತವಾಗಿರುವ ಈ ಕಂಪೆನಿಯ ಅತ್ಯಾಕರ್ಷಕ ಪ್ರದರ್ಶನಗಳು ಪ್ರೇಕ್ಷಕರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತವೆ.

ಪ್ರಾಣಿ ದಯಾ ಸಂಘದವರ ಮಧ್ಯ ಪ್ರವೇಶದಿಂದ ಪ್ರಾಣಿಗಳನ್ನು ಸರ್ಕಸ್‌ನಲ್ಲಿ ಬಳಸುವುದನ್ನು ಸುಪ್ರೀಂ ಕೋರ್ಟ್ ನಿಷೇಧಿಸಿರುವುದರಿಂದ, ಸರ್ಕಸ್ ಕಂಪನಿಗಳು ಅವನತಿಯತ್ತ ಸಾಗಿವೆ. ದೇಶದಲ್ಲಿ ಜೆಮಿನಿ ಸರ್ಕಸ್ ಸೇರಿದಂತೆ ಕೆಲವು ಸರ್ಕಸ್ ಕಂಪನಿಗಳು ಮಾತ್ರ ಉಳಿದುಕೊಂಡಿವೆ ಎಂದು ಹೇಳಲಾಗಿದೆ.

ಈ ಕಂಪನಿಗಳನ್ನೇ ನಂಬಿಕೊಂಡು ಬದುಕುತ್ತಿರುವ ನೂರಾರು ಮಂದಿ ನೌಕರರಿಗೆ, ಇದುವೇ ಜೀವನಾಧಾರವಾಗಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂತಹ ಸರ್ಕಸ್ ಕಂಪನಿಗಳ ನೆರವಿಗೆ ಬರುವುದು ಅಗತ್ಯವಾಗಿದೆ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

4 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

5 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

6 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

10 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

11 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

17 hours ago