Andolana originals

ಓದುಗರ ಪತ್ರ: ಸರ್ಕಸ್ ಕಂಪನಿಗಳಿಗೆ ಸರ್ಕಾರದ ನೆರವು ಅಗತ್ಯ

ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ‘ಜೆಮಿನಿ ಸರ್ಕಸ್’ ಪ್ರಾರಂಭಗೊಂಡಿದೆ. ದೇಶದ ಸರ್ಕಸ್ ಕಂಪೆನಿಗಳ ಇತಿಹಾಸದಲ್ಲಿ ‘ಜೆಮಿನಿ’ ಸರ್ಕಸ್‌ಗೆ ತನ್ನದೇ ಆದ ಭವ್ಯ ಇತಿಹಾಸವಿದೆ. ದೇಶದ ಉದ್ದಗಲಕ್ಕೂ ಚಿರಪರಿಚಿತವಾಗಿರುವ ಈ ಕಂಪೆನಿಯ ಅತ್ಯಾಕರ್ಷಕ ಪ್ರದರ್ಶನಗಳು ಪ್ರೇಕ್ಷಕರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತವೆ.

ಪ್ರಾಣಿ ದಯಾ ಸಂಘದವರ ಮಧ್ಯ ಪ್ರವೇಶದಿಂದ ಪ್ರಾಣಿಗಳನ್ನು ಸರ್ಕಸ್‌ನಲ್ಲಿ ಬಳಸುವುದನ್ನು ಸುಪ್ರೀಂ ಕೋರ್ಟ್ ನಿಷೇಧಿಸಿರುವುದರಿಂದ, ಸರ್ಕಸ್ ಕಂಪನಿಗಳು ಅವನತಿಯತ್ತ ಸಾಗಿವೆ. ದೇಶದಲ್ಲಿ ಜೆಮಿನಿ ಸರ್ಕಸ್ ಸೇರಿದಂತೆ ಕೆಲವು ಸರ್ಕಸ್ ಕಂಪನಿಗಳು ಮಾತ್ರ ಉಳಿದುಕೊಂಡಿವೆ ಎಂದು ಹೇಳಲಾಗಿದೆ.

ಈ ಕಂಪನಿಗಳನ್ನೇ ನಂಬಿಕೊಂಡು ಬದುಕುತ್ತಿರುವ ನೂರಾರು ಮಂದಿ ನೌಕರರಿಗೆ, ಇದುವೇ ಜೀವನಾಧಾರವಾಗಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂತಹ ಸರ್ಕಸ್ ಕಂಪನಿಗಳ ನೆರವಿಗೆ ಬರುವುದು ಅಗತ್ಯವಾಗಿದೆ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

1 hour ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

1 hour ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

2 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

3 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

6 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

6 hours ago