Andolana originals

ಓದುಗರ ಪತ್ರ: ಅತಿಥಿ ಉಪನ್ಯಾಸಕರಿಗೆ ಸರ್ಕಾರದ ಇಡುಗಂಟು ಸ್ವಾಗತಾರ್ಹ

ರಾಜ್ಯದ ವಿವಿಧ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ೬೦ ವರ್ಷಗಳನ್ನು ಪೂರೈಸಿರುವ ಅತಿಥಿ ಉಪನ್ಯಾಸಕರಿಗೆ ಅವರ ನಿವೃತ್ತಿ ಸಮಯದಲ್ಲಿ ಐದು ಲಕ್ಷ ರೂಪಾಯಿಗಳ ಇಡುಗಂಟನ್ನು ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ.

ರಾಜ್ಯದ ವಿವಿಧ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸಾವಿರಾರುವ ಉಪನ್ಯಾಸಕರು ಕೆಲಸ ಮಾಡುತ್ತಿದ್ದು, ಅವರಿಗೆ ಸಂಚಿತ ವೇತನದ ಹೊರತು ಸೇವಾಭದ್ರತೆ ಒಳಗೊಂಡಂತೆ ಬೇರಾವುದೇ ಸೇವಾ ಸೌಲಭ್ಯಗಳು ದೊರೆಯುತ್ತಿಲ್ಲ.

ಇಂತಹ ಉಪನ್ಯಾಸಕರ ಪೈಕಿ ಅನೇಕರು ಪಿಎಚ್.ಡಿ. ಪದವಿ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೂಡ ಉತ್ತೀರ್ಣರಾಗಿದ್ದಾರೆ. ತಮ್ಮ ಸೇವೆಯನ್ನು ಖಾಯಂಗೊಳಿಸುವಂತೆ ಈ ಉಪನ್ಯಾಸಕರು ಕಳೆದ ಹಲವಾರು ವರ್ಷಗಳಿಂದಲೂ ಬೇಡಿಕೆ ಸಲ್ಲಿಸುತ್ತಲೇ ಬರುತ್ತಿದ್ದಾರೆ. ಇವರ ಖಾಯಮಾತಿಗೆ ಹಲವಾರು ತಾಂತ್ರಿಕ ಅಡಚಣೆಗಳು ಹಾಗೂ ವಯೋಮಿತಿ ಅಡ್ಡವಾಗಿರುವುದರಿಂದ ಇವರನ್ನು ಖಾಯಂಗೊಳಿಸಲಾಗಿಲ್ಲ ಎನ್ನಲಾಗಿದೆ. ಆದರೂ, ರಾಜ್ಯ ಸರ್ಕಾರ ಇವರ ವೇತನವನ್ನು ಆಗಾಗ ಹೆಚ್ಚಳ ಮಾಡುತ್ತಲೇ ಬಂದಿದೆ. ಇದೀಗ ಐದು ಲಕ್ಷ ರೂ. ಇಡುಗಂಟನ್ನು ನೀಡುವ ನಿರ್ಧಾರದೊಂದಿಗೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

2 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

2 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

2 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago