ಓದುಗರ ಪತ್ರ
ರಾಜ್ಯದ ವಿವಿಧ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ೬೦ ವರ್ಷಗಳನ್ನು ಪೂರೈಸಿರುವ ಅತಿಥಿ ಉಪನ್ಯಾಸಕರಿಗೆ ಅವರ ನಿವೃತ್ತಿ ಸಮಯದಲ್ಲಿ ಐದು ಲಕ್ಷ ರೂಪಾಯಿಗಳ ಇಡುಗಂಟನ್ನು ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ.
ರಾಜ್ಯದ ವಿವಿಧ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸಾವಿರಾರುವ ಉಪನ್ಯಾಸಕರು ಕೆಲಸ ಮಾಡುತ್ತಿದ್ದು, ಅವರಿಗೆ ಸಂಚಿತ ವೇತನದ ಹೊರತು ಸೇವಾಭದ್ರತೆ ಒಳಗೊಂಡಂತೆ ಬೇರಾವುದೇ ಸೇವಾ ಸೌಲಭ್ಯಗಳು ದೊರೆಯುತ್ತಿಲ್ಲ.
ಇಂತಹ ಉಪನ್ಯಾಸಕರ ಪೈಕಿ ಅನೇಕರು ಪಿಎಚ್.ಡಿ. ಪದವಿ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೂಡ ಉತ್ತೀರ್ಣರಾಗಿದ್ದಾರೆ. ತಮ್ಮ ಸೇವೆಯನ್ನು ಖಾಯಂಗೊಳಿಸುವಂತೆ ಈ ಉಪನ್ಯಾಸಕರು ಕಳೆದ ಹಲವಾರು ವರ್ಷಗಳಿಂದಲೂ ಬೇಡಿಕೆ ಸಲ್ಲಿಸುತ್ತಲೇ ಬರುತ್ತಿದ್ದಾರೆ. ಇವರ ಖಾಯಮಾತಿಗೆ ಹಲವಾರು ತಾಂತ್ರಿಕ ಅಡಚಣೆಗಳು ಹಾಗೂ ವಯೋಮಿತಿ ಅಡ್ಡವಾಗಿರುವುದರಿಂದ ಇವರನ್ನು ಖಾಯಂಗೊಳಿಸಲಾಗಿಲ್ಲ ಎನ್ನಲಾಗಿದೆ. ಆದರೂ, ರಾಜ್ಯ ಸರ್ಕಾರ ಇವರ ವೇತನವನ್ನು ಆಗಾಗ ಹೆಚ್ಚಳ ಮಾಡುತ್ತಲೇ ಬಂದಿದೆ. ಇದೀಗ ಐದು ಲಕ್ಷ ರೂ. ಇಡುಗಂಟನ್ನು ನೀಡುವ ನಿರ್ಧಾರದೊಂದಿಗೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…