ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡನೀಯ. ಇದನ್ನು ಖಂಡಿಸಿ ಎಐಡಿಎಸ್ಒ ನೇತೃತ್ವದಲ್ಲಿ ಗ್ರಾಮಸ್ಥರು , ಪೋಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿಗಳಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಹಂಪಾಪುರ ಹಾಗೂ ಜಿನ್ನಹಳ್ಳಿಯ ಸರ್ಕಾರಿ ಶಾಲೆಗಳನ್ನು ಹೊಮ್ಮರಗಳ್ಳಿಯ ಶಾಲೆಯೊಂದಿಗೆ ವಿಲೀನಗೊಳಿಸಲಾಗುತ್ತಿದೆ. ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಪ್ರಾಥಮಿಕ ಶಿಕ್ಷಣವು ಒಂದು ಕಿ.ಮೀ. ವ್ಯಾಪ್ತಿಯ ಒಳಗಡೆ ಇರಬೇಕು ಎಂಬ ನಿಯಮಗಳು ಇವೆ.ಇದಕ್ಕೆ ವಿರುದ್ಧವಾಗಿ ಸರ್ಕಾರವು ಈ ಶಾಲೆಯನ್ನು ವಿಲೀನ ಮಾಡುತಿರುವುದು ಖಂಡನೀಯ. ಇತ್ತೀಚೆಗೆ ಹೊರಡಿಸಲಾದ ಸರ್ಕಾರದ ಹೊಸ ಆದೇಶವು ಕೌಶಲಾಧಾರಿತ ಶಿಕ್ಷಣವನ್ನು ನೀಡುವ ಮೂಲಕ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಹಣತೆ ಮಾಡಲು,ಅಡಕೆ ಕಾಯಿ ಬಿಡಿಸಲು, ತರಬೇತಿ ನೀಡುತ್ತಾ ಸರ್ಕಾರಿ ಶಾಲೆ ಮಕ್ಕಳನ್ನು ಉನ್ನತ ಶಿಕ್ಷಣದಿಂದ ದೂರ ಉಳಿಯುವಂತೆ ಹಾಗೂ ಬಡ ಕುಟುಂಬದ ಮಕ್ಕಳನ್ನು ಬಾಲ ಕಾರ್ಮಿಕ ರಾಗಿಸುವ ಸಂಚನ್ನು ಕಾನೂನಾತ್ಮಕವಾಗಿಯೇ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಮೂಲಕ ಅನುಷ್ಠಾನಕ್ಕೆ ತರುವುದು ವಿಷಾದನೀಯ.
– ಸಿದ್ದಲಿಂಗೇಗೌಡ. ಹೈರಿಗೆ, ಹೆಚ್.ಡಿ. ಕೋಟೆ ತಾಲ್ಲೂಕು
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…