ಓದುಗರ ಪತ್ರ
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ ಭದ್ರತೆ ನೀಡಿ ಸಣ್ಣ ಉದ್ಯೋಗಗಳ ಮೂಲಕ ಸ್ವಾವಲಂಬನೆಗೆ ಹಾದಿ ಮಾಡಿಕೊಟ್ಟಿದ್ದಕ್ಕಾಗಿ ಇದು ದೇಶಕ್ಕೇ ಮಾದರಿ ಎನಿಸಿದೆ. ಆದರೆ ಇದೇ ಸಮಯದಲ್ಲಿ ಅನರ್ಹರು, ಮತ್ತು ಮೃತರ ಹೆಸರಲ್ಲಿ ಹಣ ದುರ್ಬಳಕೆಯಾಗುತ್ತಿರುವ ದೂರುಗಳು ಯೋಜನೆಯ ಪಾರದರ್ಶಕತೆಗೆ ಧಕ್ಕೆ ತರುತ್ತಿವೆ. ಈ ಸೋರಿಕೆ ತಡೆಯಲು ಸರ್ಕಾರ ಬಯೋಮೆಟ್ರಿಕ್ ಹಾಗೂ ಮುಖ ಚಹರೆ ತಂತ್ರಜ್ಞಾನ ಬಳಸಿ ಮರುಪರಿಶೀಲನೆಗೆ ಮುಂದಾಗಿರುವುದು ಅತ್ಯಂತ ಕಾಲೋಚಿತ ಹಾಗೂ ಪ್ರಶಂಸನೀಯ ಹೆಜ್ಜೆ. ಆದಾಗ್ಯೂ ಸರ್ವರ್ ಸಮಸ್ಯೆ ಹಾಗೂ ತಾಂತ್ರಿಕ ತೊಡಕುಗಳಿಂದ ನಿಜವಾದ ಬಡ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗಬಾರದು. ಸರ್ಕಾರ ಈ ತಾಂತ್ರಿಕ ಪ್ರಕ್ರಿಯೆಯನ್ನು ಜನಸ್ನೇಹಿಯಾಗಿ ಜರಿಗೆ ತಂದು ಯೋಜನೆಯ ನೈಜ ಉದ್ದೇಶವನ್ನು ಎತ್ತಿಹಿಡಿಯಬೇಕು.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…
ಕೆ.ಬಿ.ರಮೇಶನಾಯಕ ಈಗಾಗಲೇ ಜವಾಬ್ದಾರಿ ಹೊತ್ತಿರುವ ಡಾ.ಯತೀಂದ್ರ, ಸುನಿಲ್ಬೋಸ್, ಜಿ.ಡಿ.ಹರೀಶ್ ಗೌಡ ತಂದೆಯಂದಿರ ನಿಧನದಿಂದ ತೆರವಾದ ಸ್ಥಾನ ತುಂಬಿದ ಅನಿಲ್ ಚಿಕ್ಕಮಾದು,…