ಓದುಗರ ಪತ್ರ
ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ ಕೆರಳಿರುವ ಇರಾನ್ ಗಲ್ ರಾಷ್ಟ್ರಗಳಲ್ಲಿರುವ ಅಮೆರಿಕ ಸೇನಾ ನೆಲೆ ಹಾಗೂ ಆ ರಾಷ್ಟ್ರದ ತೈಲ ಸಂಸ್ಕರಣಾ ಘಟಕಗಳ ಮೇಲೆ ದಾಳಿ ನಡೆಸುತ್ತಿದೆ. ಇದರಿಂದಾಗಿ ಕಚ್ಚಾ ತೈಲ ಪೂರೈಕೆ ಬಹುತೇಕ ಸ್ಥಗಿತವಾಗಿದೆ. ಅಪಾರ ಸಂಖ್ಯೆಯಲ್ಲಿ ಸಾವುನೋವು ಹಾಗೂ ಆಸ್ತಿಪಾಸ್ತಿ ನಷ್ಟ ಉಂಟಾಗುತ್ತಿದೆ. ಈ ಸಂಘರ್ಷ ದೊಡ್ಡ ಯುದ್ಧವಾಗಿ ಮಾರ್ಪಾಡಾಗುವ ಆತಂಕ ಸೃಷ್ಟಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವುದರಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಈಗಾಗಲೇ ಗೃಹೋಪಯೋಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ ೬೦ ರೂ. ಹೆಚ್ಚಳವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ಸರಕು ಸಾಗಣೆ ವೆಚ್ಚ ಹೆಚ್ಚಳವಾಗಲಿದ್ದು, ಅಗತ್ಯವಸ್ತುಗಳ ಬೆಲೆಯೂ ಏರಿಕೆಯಾದರೆ ಬಡ ಮತ್ತು ಮಧ್ಯಮ ವರ್ಗದ ಜನರು ಜೀವನ ನಡೆಸುವುದೇ ದುಸ್ತರವಾಗುತ್ತದೆ.
ಇಷ್ಟೆಲ್ಲಾ ಉದ್ವಿಗ್ನತೆಯ ನಡುವೆಯೂ ಜಗತ್ತಿನಲ್ಲಿ ಶಾಂತಿ ಕಾಪಾಡಬೇಕಾದ ವಿಶ್ವಸಂಸ್ಥೆ ಮೌನ ವಹಿಸಿರುವುದು ಬೇಸರದ ಸಂಗತಿಯಾಗಿದೆ. ಕೂಡಲೇ ವಿಶ್ವಸಂಸ್ಥೆಯ ಮುಖ್ಯ ಕಾರ್ಯದರ್ಶಿ ಸಭೆ ಕರೆದು ಯುದ್ಧ ನಿಲ್ಲಿಸುವ ಮೂಲಕ ಜಗತ್ತಿನಲ್ಲಿ ಶಾಂತಿ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲವಾದರೆ ನಾವು ಯುದ್ಧವನ್ನು ಕೊನೆಗಾಣಿಸಬೇಕು, ಇಲ್ಲವಾದರೆ ಯುದ್ಧವೇ ನಮ್ಮನ್ನು ಕೊನೆಗಾಣಿಸುತ್ತದೆ ಎಂಬ ಜಾನ್ ಎಫ್ ಕೆನಡಿಯವರ ಮಾತು ದಿಟವಾಗುವುದು ದೂರವಿಲ್ಲ!
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…
ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ…
ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…
ಟೆಹ್ರಾನ್ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…
ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…