ಓದುಗರ ಪತ್ರ
ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ ಕೆರಳಿರುವ ಇರಾನ್ ಗಲ್ ರಾಷ್ಟ್ರಗಳಲ್ಲಿರುವ ಅಮೆರಿಕ ಸೇನಾ ನೆಲೆ ಹಾಗೂ ಆ ರಾಷ್ಟ್ರದ ತೈಲ ಸಂಸ್ಕರಣಾ ಘಟಕಗಳ ಮೇಲೆ ದಾಳಿ ನಡೆಸುತ್ತಿದೆ. ಇದರಿಂದಾಗಿ ಕಚ್ಚಾ ತೈಲ ಪೂರೈಕೆ ಬಹುತೇಕ ಸ್ಥಗಿತವಾಗಿದೆ. ಅಪಾರ ಸಂಖ್ಯೆಯಲ್ಲಿ ಸಾವುನೋವು ಹಾಗೂ ಆಸ್ತಿಪಾಸ್ತಿ ನಷ್ಟ ಉಂಟಾಗುತ್ತಿದೆ. ಈ ಸಂಘರ್ಷ ದೊಡ್ಡ ಯುದ್ಧವಾಗಿ ಮಾರ್ಪಾಡಾಗುವ ಆತಂಕ ಸೃಷ್ಟಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವುದರಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಈಗಾಗಲೇ ಗೃಹೋಪಯೋಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ ೬೦ ರೂ. ಹೆಚ್ಚಳವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ಸರಕು ಸಾಗಣೆ ವೆಚ್ಚ ಹೆಚ್ಚಳವಾಗಲಿದ್ದು, ಅಗತ್ಯವಸ್ತುಗಳ ಬೆಲೆಯೂ ಏರಿಕೆಯಾದರೆ ಬಡ ಮತ್ತು ಮಧ್ಯಮ ವರ್ಗದ ಜನರು ಜೀವನ ನಡೆಸುವುದೇ ದುಸ್ತರವಾಗುತ್ತದೆ.
ಇಷ್ಟೆಲ್ಲಾ ಉದ್ವಿಗ್ನತೆಯ ನಡುವೆಯೂ ಜಗತ್ತಿನಲ್ಲಿ ಶಾಂತಿ ಕಾಪಾಡಬೇಕಾದ ವಿಶ್ವಸಂಸ್ಥೆ ಮೌನ ವಹಿಸಿರುವುದು ಬೇಸರದ ಸಂಗತಿಯಾಗಿದೆ. ಕೂಡಲೇ ವಿಶ್ವಸಂಸ್ಥೆಯ ಮುಖ್ಯ ಕಾರ್ಯದರ್ಶಿ ಸಭೆ ಕರೆದು ಯುದ್ಧ ನಿಲ್ಲಿಸುವ ಮೂಲಕ ಜಗತ್ತಿನಲ್ಲಿ ಶಾಂತಿ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲವಾದರೆ ನಾವು ಯುದ್ಧವನ್ನು ಕೊನೆಗಾಣಿಸಬೇಕು, ಇಲ್ಲವಾದರೆ ಯುದ್ಧವೇ ನಮ್ಮನ್ನು ಕೊನೆಗಾಣಿಸುತ್ತದೆ ಎಂಬ ಜಾನ್ ಎಫ್ ಕೆನಡಿಯವರ ಮಾತು ದಿಟವಾಗುವುದು ದೂರವಿಲ್ಲ!
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…