ಓದುಗರ ಪತ್ರ
ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ ಕೆರಳಿರುವ ಇರಾನ್ ಗಲ್ ರಾಷ್ಟ್ರಗಳಲ್ಲಿರುವ ಅಮೆರಿಕ ಸೇನಾ ನೆಲೆ ಹಾಗೂ ಆ ರಾಷ್ಟ್ರದ ತೈಲ ಸಂಸ್ಕರಣಾ ಘಟಕಗಳ ಮೇಲೆ ದಾಳಿ ನಡೆಸುತ್ತಿದೆ. ಇದರಿಂದಾಗಿ ಕಚ್ಚಾ ತೈಲ ಪೂರೈಕೆ ಬಹುತೇಕ ಸ್ಥಗಿತವಾಗಿದೆ. ಅಪಾರ ಸಂಖ್ಯೆಯಲ್ಲಿ ಸಾವುನೋವು ಹಾಗೂ ಆಸ್ತಿಪಾಸ್ತಿ ನಷ್ಟ ಉಂಟಾಗುತ್ತಿದೆ. ಈ ಸಂಘರ್ಷ ದೊಡ್ಡ ಯುದ್ಧವಾಗಿ ಮಾರ್ಪಾಡಾಗುವ ಆತಂಕ ಸೃಷ್ಟಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವುದರಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಈಗಾಗಲೇ ಗೃಹೋಪಯೋಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ ೬೦ ರೂ. ಹೆಚ್ಚಳವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ಸರಕು ಸಾಗಣೆ ವೆಚ್ಚ ಹೆಚ್ಚಳವಾಗಲಿದ್ದು, ಅಗತ್ಯವಸ್ತುಗಳ ಬೆಲೆಯೂ ಏರಿಕೆಯಾದರೆ ಬಡ ಮತ್ತು ಮಧ್ಯಮ ವರ್ಗದ ಜನರು ಜೀವನ ನಡೆಸುವುದೇ ದುಸ್ತರವಾಗುತ್ತದೆ.
ಇಷ್ಟೆಲ್ಲಾ ಉದ್ವಿಗ್ನತೆಯ ನಡುವೆಯೂ ಜಗತ್ತಿನಲ್ಲಿ ಶಾಂತಿ ಕಾಪಾಡಬೇಕಾದ ವಿಶ್ವಸಂಸ್ಥೆ ಮೌನ ವಹಿಸಿರುವುದು ಬೇಸರದ ಸಂಗತಿಯಾಗಿದೆ. ಕೂಡಲೇ ವಿಶ್ವಸಂಸ್ಥೆಯ ಮುಖ್ಯ ಕಾರ್ಯದರ್ಶಿ ಸಭೆ ಕರೆದು ಯುದ್ಧ ನಿಲ್ಲಿಸುವ ಮೂಲಕ ಜಗತ್ತಿನಲ್ಲಿ ಶಾಂತಿ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲವಾದರೆ ನಾವು ಯುದ್ಧವನ್ನು ಕೊನೆಗಾಣಿಸಬೇಕು, ಇಲ್ಲವಾದರೆ ಯುದ್ಧವೇ ನಮ್ಮನ್ನು ಕೊನೆಗಾಣಿಸುತ್ತದೆ ಎಂಬ ಜಾನ್ ಎಫ್ ಕೆನಡಿಯವರ ಮಾತು ದಿಟವಾಗುವುದು ದೂರವಿಲ್ಲ!
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…