Andolana originals

ಓದುಗರ ಪತ್ರ: ಕೊಲ್ಲಿ ಯುದ್ಧ: ವಿಶ್ವ ಸಂಸ್ಥೆಯ ಮೌನವೇಕೆ?

ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ ಕೆರಳಿರುವ ಇರಾನ್ ಗಲ್ ರಾಷ್ಟ್ರಗಳಲ್ಲಿರುವ ಅಮೆರಿಕ ಸೇನಾ ನೆಲೆ ಹಾಗೂ ಆ ರಾಷ್ಟ್ರದ ತೈಲ ಸಂಸ್ಕರಣಾ ಘಟಕಗಳ ಮೇಲೆ ದಾಳಿ ನಡೆಸುತ್ತಿದೆ. ಇದರಿಂದಾಗಿ ಕಚ್ಚಾ ತೈಲ ಪೂರೈಕೆ ಬಹುತೇಕ ಸ್ಥಗಿತವಾಗಿದೆ. ಅಪಾರ ಸಂಖ್ಯೆಯಲ್ಲಿ ಸಾವುನೋವು ಹಾಗೂ ಆಸ್ತಿಪಾಸ್ತಿ ನಷ್ಟ ಉಂಟಾಗುತ್ತಿದೆ. ಈ ಸಂಘರ್ಷ ದೊಡ್ಡ ಯುದ್ಧವಾಗಿ ಮಾರ್ಪಾಡಾಗುವ ಆತಂಕ ಸೃಷ್ಟಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವುದರಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಈಗಾಗಲೇ ಗೃಹೋಪಯೋಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ೬೦ ರೂ. ಹೆಚ್ಚಳವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ಸರಕು ಸಾಗಣೆ ವೆಚ್ಚ ಹೆಚ್ಚಳವಾಗಲಿದ್ದು, ಅಗತ್ಯವಸ್ತುಗಳ ಬೆಲೆಯೂ ಏರಿಕೆಯಾದರೆ ಬಡ ಮತ್ತು ಮಧ್ಯಮ ವರ್ಗದ ಜನರು ಜೀವನ ನಡೆಸುವುದೇ ದುಸ್ತರವಾಗುತ್ತದೆ.

ಇಷ್ಟೆಲ್ಲಾ ಉದ್ವಿಗ್ನತೆಯ ನಡುವೆಯೂ ಜಗತ್ತಿನಲ್ಲಿ ಶಾಂತಿ ಕಾಪಾಡಬೇಕಾದ ವಿಶ್ವಸಂಸ್ಥೆ ಮೌನ ವಹಿಸಿರುವುದು ಬೇಸರದ ಸಂಗತಿಯಾಗಿದೆ. ಕೂಡಲೇ ವಿಶ್ವಸಂಸ್ಥೆಯ ಮುಖ್ಯ ಕಾರ್ಯದರ್ಶಿ ಸಭೆ ಕರೆದು ಯುದ್ಧ ನಿಲ್ಲಿಸುವ ಮೂಲಕ ಜಗತ್ತಿನಲ್ಲಿ ಶಾಂತಿ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲವಾದರೆ ನಾವು ಯುದ್ಧವನ್ನು ಕೊನೆಗಾಣಿಸಬೇಕು, ಇಲ್ಲವಾದರೆ ಯುದ್ಧವೇ ನಮ್ಮನ್ನು ಕೊನೆಗಾಣಿಸುತ್ತದೆ ಎಂಬ ಜಾನ್ ಎಫ್ ಕೆನಡಿಯವರ ಮಾತು ದಿಟವಾಗುವುದು ದೂರವಿಲ್ಲ!

 –ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

56 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

4 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

4 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

4 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago