ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ ಮೊದಲನೇ ದಿನ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಗಣ್ಯ ವ್ಯಕ್ತಿಗಳು ತಾಯಿ ಚಾಮುಂಡೇಶ್ವರಿ ಪೂಜೆ ಸಲ್ಲಿಸುವ ಮೂಲಕ ಉದ್ಘಾಟನೆ ಮಾಡಿಸುವ ಸಂಪ್ರದಾಯ ರೂಢಿಗೆ ಬಂದಿದೆ.
ಈ ಬಾರಿಯ ದಸರಾ ಉದ್ಘಾಟನೆಯನ್ನು ಹಿರಿಯ ರಾಜಕೀಯ ಧುರೀಣರೂ, ಮಾಜಿ ಪ್ರಧಾನಿಯೂ ಆದ ಹೆಚ್.ಡಿ. ದೇವೇಗೌಡ ಅವರಿಂದ ಮಾಡಿಸಿದರೆ ಸೂಕ್ತವಾಗಿರುತ್ತದೆ. ಹೇಮಾವತಿ ಅಣೆಕಟ್ಟೆಯನ್ನು ನಿರ್ಮಿಸುವಲ್ಲಿ ಗೌಡರು ಪ್ರಮುಖ ಪಾತ್ರ ವಹಿಸಿ ಬರಡು ಭೂಮಿಗೆ ನೀರು ಹರಿಸಿದರು ಹಾಗೆಯೇ ಆಲಮಟ್ಟ ಅಣೆಕಟ್ಟೆ ಎತ್ತರಿಸುವಲ್ಲಿ ಪ್ರಮುಖ ಪಾತ್ರವಹಿಸಿದವರು. ನೀರಾವರಿ ಬಗ್ಗೆ ,ರೈತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಅಭಿಮಾನಿಗಳಲ್ಲಿ ‘ಮಣ್ಣಿನ ಮಗ’ ಎಂದೂ ಕರೆಸಿಕೊಂಡಿದ್ದಾರೆ.
೧೯೮೩ರಲ್ಲಿ ಕಾಂಗ್ರೆಸ್ಸೇತರ ಸರ್ಕಾರ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ರಾಮಕೃಷ್ಣ ಹೆಗಡೆ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದವರು. ಹಾಗೆಯೇ ೧೯೯೪ ರಲ್ಲಿ ಮುಖ್ಯಮಂತ್ರಿ ಆಗಿ ನಂತರ ೧೯೯೬ರಲ್ಲಿ ಕೇಂದ್ರದಲ್ಲಿ ಅತಂತ್ರ ಲೋಕಸಭೆ ರಚನೆಯಾದಾಗ ಪ್ರಧಾನಿ ಹುದ್ದೆ ಅಲಂಕರಿಸಿ, ಕರ್ನಾಟಕದ ಮೂದಲ ಪ್ರದಾನಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಾರ್ವಜನಿಕ ಕ್ಷೇತ್ರದಲ್ಲಿ ಈಗಲೂ ಸಕ್ರಿಯರಾಗಿರುವ ಈ ಹಿರಿಯ ರಾಜಕೀಯ ಮುತ್ಸದ್ದಿಯನ್ನು ರಾಜ್ಯ ಸರ್ಕಾರ ೨೦೨೬ ನೇ ಸಾಲಿನ ದಸರಾ ಉದ್ಘಾಟರಾಗಿ ಆಯ್ಕೆ ಮಾಡಿದರೆ ಒಳ್ಳೆಯದು. ಚಾಣಾಕ್ಷ ರಾಜಕಾರಣಿ, ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇವೇಗೌಡರ ಆಯ್ಕೆಯನ್ನು ಘೋಷಿಸಲಿ.
-ಸಿದ್ದಲಿಂಗೆಗೌಡ, ಹೈರಿಗೆ ಗ್ರಾಮ, ಹೆಚ್. ಡಿ. ಕೋಟೆ ತಾಲ್ಲೂಕು
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…
ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ…