Andolana originals

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರಬರೆದಿರುವುದು ಶ್ಲಾಘನೀಯವಾದದು.

ವಿರೋಧ ಪಕ್ಷದ ನಾಯಕ ಹಾಗೂ ಸಂಸದರಾದ ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಲೋಕಸಭಾ ಹಾಗೂ ರಾಜ್ಯಸಭಾ ಸಂಸದರ ಜೊತೆಗೂಡಿ ನೂತನ ಸಂಸತ್ ಭವನದ ಮೆಟ್ಟಿಲುಗಳ ಮೇಲೆ ಕುಳಿತು ಚಹ, ಕಾಫಿ, ಬಿಸ್ಕತ್ ಸವಿಯುತ್ತ ಸಂಸತ್ತಿನ ಒಳಗಡೆ ಹೋಗುವ ಬಿಜೆಪಿ ಸಂಸದರನ್ನು ಹಾಗೂ ಕೇಂದ್ರದ ಮಂತ್ರಿಗಳನ್ನು ಚುಡಾಯಿಸಿ, ಕೇಕೆ ಹಾಕುವುದು ಸಂಸದರ ನಡೆಗೆ ಕುಂದು ತರುವುದು ಎಂದು ಪತ್ರದ ಮುಖೇನ ತಿಳಿಸಿರುವುದು ಸ್ವಾಗತಾರ್ಹ.

ಹಿರಿಯ ಸಂಸದರು ಹಾಗೂ ನಾಯಕರು( ಹಿರಿ ಅಕ್ಕನ ಚಾಳಿ ಮನೆಮಂದಿಗೆಲ್ಲ ಎಂಬ ಮಾತಿನಂತೆ ) ತಪ್ಪು ಹಾದಿಯಲ್ಲಿ ನಡೆದರೆ ಯುವ ಸಂಸದರ ಪಾಡೇನು? ಸಂಸತ್ತಿನ ಘನತೆ ಹಾಗೂ ಗೌರವಕ್ಕೆ ಕುಂದು ಬರುವುದರಲ್ಲಿ ಅನುಮಾನವೇ ಇಲ್ಲ.ಇನ್ನು ಮುಂದಾದರೂ ವಿರೋಧ ಪಕ್ಷವು ಆಧಾರರಹಿತ ಆರೋಪ ಮಾಡದೆ ಜವಾಬ್ದಾರಿಯುತವಾಗಿ ವರ್ತಿಸಿ ಸಂಸತ್ತಿನ ಘನತೆಯನ್ನು ಹೆಚ್ಚಿಸುವುದು ಅಗತ್ಯ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

2 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

12 mins ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

18 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago