Andolana originals

ಓದುಗರ ಪತ್ರ: ಹೇರ್ ಡೈ: ಹಾನಿಕಾರಕ ರಾಸಾಯನಿಕಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ ಹೇರ್‌ಡೈ (ಕೂದಲಿಗೆ ಹಚ್ಚುವ ಕೃತಕ ಬಣ್ಣ) ಉಪಯೋಗ ಸರ್ವೇ ಸಾಮಾನ್ಯವಾಗಿದೆ. ಹೇರ್ ಡೈಗಳಲ್ಲಿ ಇರುವ ಹಲವಾರು ರಾಸಾಯನಿಕಗಳು ನಮ್ಮ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತವೆ ಎಂಬುದು ವರದಿಗಳಿಂದ ತಿಳಿದು ಬಂದಿದೆ.

ಹೇರ್ ಡೈಯಲ್ಲಿರುವ ಪ್ಯಾರಾಫೆನಿಲೆಂಡಿಯಾಮಿನ್, ಟೋಲುಯೆನ್-೨. ೫-ಡಯಾಮಿನ್  ಮುಂತಾದ ರಾಸಾಯನಿಕಗಳು ತ್ವಚೆಗೆ ಹಾನಿ ಮಾಡಬಹುದು, ಅಲರ್ಜಿಗಳನ್ನು ಉಂಟುಮಾಡಬಹುದು ಮತ್ತು ಕೆಲವೊಮ್ಮೆ ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು. ಇತ್ತೀಚೆಗೆ, ಇತರ ದೇಶಗಳು ಈ ಹಾನಿಕರ ರಾಸಾಯನಿಕಗಳ ಬಳಕೆಯನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಂಡಿವೆ. ಯುರೋಪಿಯನ್ ಯೂನಿಯನ್ ಹೇರ್ ಡೈಗಳಲ್ಲಿ ಕೆಲವು ಹಾನಿಕರ ರಾಸಾಯನಿಕಗಳನ್ನು ನಿಷೇಧಿಸಿತು. ಅಮೆರಿಕದ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ ಕೂಡ, ಈ ರಾಸಾಯನಿಕಗಳನ್ನು ಹೆಚ್ಚಾಗಿ ಪರಿಶೀಲಿಸುಮಾಡಿ, ಸುರಕ್ಷತೆ ಹೆಚ್ಚಿಸಲು ಕ್ರಮಗಳನ್ನು ಜಾರಿಗೆ ತಂದಿದೆ.

ಭಾರತದಲ್ಲಿಯೂ, ಹೇರ್ ಡೈಗಳಲ್ಲಿ ಹಾನಿಕರ ರಾಸಾಯನಿಕಗಳ ಬಳಕೆಯನ್ನು ನಿಯಂತ್ರಿಸಲು ಸರಕಾರವು ಕ್ರಮಗಳನ್ನು ಕೈಗೊಳ್ಳಬೇಕು. ಸರಕಾರವು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಸಾಮಾಜಿಕ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳನ್ನು ಬಳಸಿ ಸುರಕ್ಷಿತ ಆಯ್ಕೆಗಳನ್ನು ಮಾಡಲು ಪ್ರೋತ್ಸಾಹಿಸಬೇಕು.

-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

3 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

3 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

3 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

3 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

4 hours ago