Andolana originals

ಓದುಗರ ಪತ್ರ: ಹೇರ್ ಡೈ: ಹಾನಿಕಾರಕ ರಾಸಾಯನಿಕಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ ಹೇರ್‌ಡೈ (ಕೂದಲಿಗೆ ಹಚ್ಚುವ ಕೃತಕ ಬಣ್ಣ) ಉಪಯೋಗ ಸರ್ವೇ ಸಾಮಾನ್ಯವಾಗಿದೆ. ಹೇರ್ ಡೈಗಳಲ್ಲಿ ಇರುವ ಹಲವಾರು ರಾಸಾಯನಿಕಗಳು ನಮ್ಮ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತವೆ ಎಂಬುದು ವರದಿಗಳಿಂದ ತಿಳಿದು ಬಂದಿದೆ.

ಹೇರ್ ಡೈಯಲ್ಲಿರುವ ಪ್ಯಾರಾಫೆನಿಲೆಂಡಿಯಾಮಿನ್, ಟೋಲುಯೆನ್-೨. ೫-ಡಯಾಮಿನ್  ಮುಂತಾದ ರಾಸಾಯನಿಕಗಳು ತ್ವಚೆಗೆ ಹಾನಿ ಮಾಡಬಹುದು, ಅಲರ್ಜಿಗಳನ್ನು ಉಂಟುಮಾಡಬಹುದು ಮತ್ತು ಕೆಲವೊಮ್ಮೆ ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು. ಇತ್ತೀಚೆಗೆ, ಇತರ ದೇಶಗಳು ಈ ಹಾನಿಕರ ರಾಸಾಯನಿಕಗಳ ಬಳಕೆಯನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಂಡಿವೆ. ಯುರೋಪಿಯನ್ ಯೂನಿಯನ್ ಹೇರ್ ಡೈಗಳಲ್ಲಿ ಕೆಲವು ಹಾನಿಕರ ರಾಸಾಯನಿಕಗಳನ್ನು ನಿಷೇಧಿಸಿತು. ಅಮೆರಿಕದ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ ಕೂಡ, ಈ ರಾಸಾಯನಿಕಗಳನ್ನು ಹೆಚ್ಚಾಗಿ ಪರಿಶೀಲಿಸುಮಾಡಿ, ಸುರಕ್ಷತೆ ಹೆಚ್ಚಿಸಲು ಕ್ರಮಗಳನ್ನು ಜಾರಿಗೆ ತಂದಿದೆ.

ಭಾರತದಲ್ಲಿಯೂ, ಹೇರ್ ಡೈಗಳಲ್ಲಿ ಹಾನಿಕರ ರಾಸಾಯನಿಕಗಳ ಬಳಕೆಯನ್ನು ನಿಯಂತ್ರಿಸಲು ಸರಕಾರವು ಕ್ರಮಗಳನ್ನು ಕೈಗೊಳ್ಳಬೇಕು. ಸರಕಾರವು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಸಾಮಾಜಿಕ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳನ್ನು ಬಳಸಿ ಸುರಕ್ಷಿತ ಆಯ್ಕೆಗಳನ್ನು ಮಾಡಲು ಪ್ರೋತ್ಸಾಹಿಸಬೇಕು.

-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

1 hour ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago