ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿರುವುದು ನಿಜಕ್ಕೂ ಖಂಡನೀಯ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಕಲಾಪದ ವೇಳೆ ಶಾಸಕ ಹರೀಶ್ ಪೂಂಜಾ ಈ ರೀತಿ ಹೇಳಿದ್ದು, ರೈತರಿಗೆ ಕೋವಿ ಪಡೆಯಲು ಪರವಾನಗಿ ನೀಡಿ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದಿದ್ದಾರೆ.
ಇದಕ್ಕೆ ಪ್ರತಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ಅನುಮತಿ ಕೇಳಿದ್ದು, ದುರದೃಷ್ಟಕರ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ. ಅಷ್ಟಕ್ಕೂ ಕಾಡಿದ್ದರೇ ನಾಡು ಎಂಬ ಕನಿಷ್ಠ ಜ್ಞಾನವೂ ಹರೀಶ್ ಪೂಂಜಾರವರಿಗೆ ಇಲ್ಲದೆ ಹೋದದ್ದೇ ಬೇಸರದ ಸಂಗತಿ. ೧೯೭೪ರ ವನ್ಯಜೀವಿ ಕಾಯ್ದೆಯ ಪ್ರಕಾರ ವನ್ಯಜೀವಿಗಳನ್ನು ಕೊಲ್ಲುವುದು, ಅವುಗಳನ್ನು ಕೊಲ್ಲುವಂತೆ ಪ್ರಚೋದಿಸುವುದು ಎರಡೂ ಅಪರಾಧ. ಆನೆಗಳು ಎಂದರೆ ನಮಗೆ ವಿಶೇಷವಾದ ಪ್ರೀತಿ ಇದೆ.
ದೈವತ್ವದ ಭಾವನೆಯೂ ಇದೆ. ಇಂತಹ ಆನೆಗಳು ಆಹಾರ ಅರಸಿ ಕಾಡಿನಿಂದ ನಾಡಿಗೆ ಬರುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ರೈಲ್ವೆ ಕಂಬಿ ಬ್ಯಾರಿಕೇಡ್ ಅಳವಡಿಸುವುದು ಅಥವಾ ಟ್ರಂಚ್ಗಳ ನಿರ್ಮಾಣ ಮಾಡವ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಬೇಕೇ ವಿನಾ ಅವುಗಳನ್ನು ಕೊಲ್ಲುತ್ತೇವೆ ಎನ್ನುವುದು ಅಮಾನವೀಯ ವರ್ತನೆ. ಸರ್ಕಾರ ಶಾಸಕ ಹರೀಶ್ ಪೂಂಜಾರವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ.
-ರಾಜೇಶ್, ಅಂತರಸಂತೆ, ಎಚ್. ಡಿ. ಕೋಟೆ ತಾ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…