Andolana originals

ಓದುಗರ ಪತ್ರ: ಅಮೃತ್ ನಗರ ಯೋಜನೆ ವಿಫಲವಾಯಿತೆ?

ಅಟಲ್ ಮಿಷನ್ ಫಾರ್ ರೆಜುನೇಷನ್ ಅಂಡ್ ಅರ್ಬನ್ ಟ್ರಾನ್ಸ್ ಫರ್ಮೇಷನ್ (ಅಮೃತ್) ನಗರ ಯೋಜನೆಯನ್ನು ೨೦೧೫ರಲ್ಲಿ ನಗರಗಳ ಶಾಶ್ವತ ಅಭಿವೃದ್ಧಿಗಾಗಿ ಭಾರತ ಸರ್ಕಾರ ಆರಂಭಿಸಿತು. ಎಲ್ಲ ನಗರ ಮನೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ, ಒಳಚರಂಡಿ ವ್ಯವಸ್ಥೆಯ ಸುಧಾರಣೆ, ಹಸಿರು ಪ್ರದೇಶಗಳ ವಿಸ್ತರಣೆ ಮತ್ತು ಮಳೆನೀರು ಸಂಗ್ರಹ ಈ ಯೋಜನೆಯ ಪ್ರಮುಖ ಉದ್ದೇಶವಾಗಿತ್ತು. ಆದರೆ ವರದಿಗಳ ಪ್ರಕಾರ ಯೋಜನೆಯ ಅನುಷ್ಠಾನದಲ್ಲಿ ಅನೇಕ ಸಮಸ್ಯೆಗಳು ಎದುರಾಗಿ ಅದು ತನ್ನ ಗುರಿಯನ್ನು ಸಾಧಿಸಲು ವಿಫಲವಾಗಿದೆ.

ಯೋಜನೆ ವಿಫಲವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯದ ಕೊರತೆ, ಅನೇಕ ನಗರಗಳ ಸ್ಥಳೀಯ ಸಂಸ್ಥೆಗಳು ಸೂಕ್ತ ಯೋಜನೆ ರೂಪಿಸುವಲ್ಲಿ ವಿಫಲವಾಗಿರುವುದು, ಟೆಂಡರ್ ಪ್ರಕ್ರಿಯೆಯಲ್ಲಿ ಅಸ್ಪಷ್ಟತೆ, ತಾಂತ್ರಿಕ ಅನುಮೋದನೆಗಳ ವಿಳಂಬ ಮತ್ತು ನಿರ್ವಹಣೆಯ ಅಸಮರ್ಪಕತೆಗಳಿಂದ ಕಾಮಗಾರಿಗಳು ಸಂಪೂರ್ಣ ವಾಗಿ ನಿಂತುಹೋಗಿವೆ.

ಹಣಕಾಸಿನ ದುರ್ಬಳಕೆ ಮತ್ತು ಅಕ್ರಮಗಳೂ ಈ ಯೋಜನೆಯ ಮೇಲೆ ಕಳಂಕ ತಂದಿವೆ ಎನ್ನಲಾಗುತ್ತಿದೆ. ಕೆಲವು ನಗರಗಳಲ್ಲಿ ಬಿಲ್ ಪಾವತಿಗಳಲ್ಲಿ ಅಕ್ರಮಗಳು ನಡೆದಿದ್ದು, ನಿಜವಾದ ಕಾರ್ಯನಿರ್ವಹಣೆಗಿಂತ ರಾಜಕೀಯ ಪ್ರಭಾವ ಹೆಚ್ಚಾಗಿದೆ ಎಂಬುದು ಜನಜನಿತ. ನಾಗರಿಕರ ಭಾಗವಹಿಸುವಿಕೆಯ ಕೊರತೆಯೂ ಮತ್ತೊಂದು ಸಮಸ್ಯೆಯಾಗಿದೆ. ಜನರ ನಿಜವಾದ ಅಗತ್ಯಗಳನ್ನು ಪರಿಗಣಿಸದೆ ಯೋಜನೆ ರೂಪಿಸಿದದರಿಂದ ಈ ಯೋಜನೆ ಜನಹಿತಕಾರಿಯಾಗಿಲ್ಲ ಎನ್ನಲಾಗಿದೆ.

ಒಟ್ಟಾರೆ ನೋಡಿದರೆ, ಅಮೃತ್ ನಗರ ಯೋಜನೆ ಉದ್ದೇಶ ಒಳ್ಳೆಯದಾದರೂ ಅದರ ಅನುಷ್ಠಾನದಲ್ಲಿ ಕಂಡುಬಂದ ನಿರ್ಲಕ್ಷ್ಯ, ಅಸಮರ್ಪಕತೆ ಮತ್ತು ಪಾರದರ್ಶಕತೆಯ ಕೊರತೆಯಿಂದ ವಿಫಲವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಯೋಜನೆಗಳು ಯಶಸ್ವಿಯಾಗಲು ಸರ್ಕಾರವು ಪಾರದರ್ಶಕ ನಿರ್ವಹಣೆ, ಸ್ಥಳೀಯ ಜನರ ಪಾಲ್ಗೊಳ್ಳುವಿಕೆ ಮತ್ತು ವ್ಯವಸ್ಥೆಗಳನ್ನು ಬಲಪಡಿಸಬೇಕು ಆಗ ಮಾತ್ರ ನಗರಾಭಿವೃದ್ಧಿಯ ನಿಜವಾದ ಅರ್ಥ ಸಾಕಾರವಾಗುತ್ತದೆ.

-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

12 mins ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

44 mins ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

2 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

3 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

3 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

3 hours ago