Andolana originals

ಓದುಗರ ಪತ್ರ: ಅಮೃತ್ ನಗರ ಯೋಜನೆ ವಿಫಲವಾಯಿತೆ?

ಅಟಲ್ ಮಿಷನ್ ಫಾರ್ ರೆಜುನೇಷನ್ ಅಂಡ್ ಅರ್ಬನ್ ಟ್ರಾನ್ಸ್ ಫರ್ಮೇಷನ್ (ಅಮೃತ್) ನಗರ ಯೋಜನೆಯನ್ನು ೨೦೧೫ರಲ್ಲಿ ನಗರಗಳ ಶಾಶ್ವತ ಅಭಿವೃದ್ಧಿಗಾಗಿ ಭಾರತ ಸರ್ಕಾರ ಆರಂಭಿಸಿತು. ಎಲ್ಲ ನಗರ ಮನೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ, ಒಳಚರಂಡಿ ವ್ಯವಸ್ಥೆಯ ಸುಧಾರಣೆ, ಹಸಿರು ಪ್ರದೇಶಗಳ ವಿಸ್ತರಣೆ ಮತ್ತು ಮಳೆನೀರು ಸಂಗ್ರಹ ಈ ಯೋಜನೆಯ ಪ್ರಮುಖ ಉದ್ದೇಶವಾಗಿತ್ತು. ಆದರೆ ವರದಿಗಳ ಪ್ರಕಾರ ಯೋಜನೆಯ ಅನುಷ್ಠಾನದಲ್ಲಿ ಅನೇಕ ಸಮಸ್ಯೆಗಳು ಎದುರಾಗಿ ಅದು ತನ್ನ ಗುರಿಯನ್ನು ಸಾಧಿಸಲು ವಿಫಲವಾಗಿದೆ.

ಯೋಜನೆ ವಿಫಲವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯದ ಕೊರತೆ, ಅನೇಕ ನಗರಗಳ ಸ್ಥಳೀಯ ಸಂಸ್ಥೆಗಳು ಸೂಕ್ತ ಯೋಜನೆ ರೂಪಿಸುವಲ್ಲಿ ವಿಫಲವಾಗಿರುವುದು, ಟೆಂಡರ್ ಪ್ರಕ್ರಿಯೆಯಲ್ಲಿ ಅಸ್ಪಷ್ಟತೆ, ತಾಂತ್ರಿಕ ಅನುಮೋದನೆಗಳ ವಿಳಂಬ ಮತ್ತು ನಿರ್ವಹಣೆಯ ಅಸಮರ್ಪಕತೆಗಳಿಂದ ಕಾಮಗಾರಿಗಳು ಸಂಪೂರ್ಣ ವಾಗಿ ನಿಂತುಹೋಗಿವೆ.

ಹಣಕಾಸಿನ ದುರ್ಬಳಕೆ ಮತ್ತು ಅಕ್ರಮಗಳೂ ಈ ಯೋಜನೆಯ ಮೇಲೆ ಕಳಂಕ ತಂದಿವೆ ಎನ್ನಲಾಗುತ್ತಿದೆ. ಕೆಲವು ನಗರಗಳಲ್ಲಿ ಬಿಲ್ ಪಾವತಿಗಳಲ್ಲಿ ಅಕ್ರಮಗಳು ನಡೆದಿದ್ದು, ನಿಜವಾದ ಕಾರ್ಯನಿರ್ವಹಣೆಗಿಂತ ರಾಜಕೀಯ ಪ್ರಭಾವ ಹೆಚ್ಚಾಗಿದೆ ಎಂಬುದು ಜನಜನಿತ. ನಾಗರಿಕರ ಭಾಗವಹಿಸುವಿಕೆಯ ಕೊರತೆಯೂ ಮತ್ತೊಂದು ಸಮಸ್ಯೆಯಾಗಿದೆ. ಜನರ ನಿಜವಾದ ಅಗತ್ಯಗಳನ್ನು ಪರಿಗಣಿಸದೆ ಯೋಜನೆ ರೂಪಿಸಿದದರಿಂದ ಈ ಯೋಜನೆ ಜನಹಿತಕಾರಿಯಾಗಿಲ್ಲ ಎನ್ನಲಾಗಿದೆ.

ಒಟ್ಟಾರೆ ನೋಡಿದರೆ, ಅಮೃತ್ ನಗರ ಯೋಜನೆ ಉದ್ದೇಶ ಒಳ್ಳೆಯದಾದರೂ ಅದರ ಅನುಷ್ಠಾನದಲ್ಲಿ ಕಂಡುಬಂದ ನಿರ್ಲಕ್ಷ್ಯ, ಅಸಮರ್ಪಕತೆ ಮತ್ತು ಪಾರದರ್ಶಕತೆಯ ಕೊರತೆಯಿಂದ ವಿಫಲವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಯೋಜನೆಗಳು ಯಶಸ್ವಿಯಾಗಲು ಸರ್ಕಾರವು ಪಾರದರ್ಶಕ ನಿರ್ವಹಣೆ, ಸ್ಥಳೀಯ ಜನರ ಪಾಲ್ಗೊಳ್ಳುವಿಕೆ ಮತ್ತು ವ್ಯವಸ್ಥೆಗಳನ್ನು ಬಲಪಡಿಸಬೇಕು ಆಗ ಮಾತ್ರ ನಗರಾಭಿವೃದ್ಧಿಯ ನಿಜವಾದ ಅರ್ಥ ಸಾಕಾರವಾಗುತ್ತದೆ.

-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

32 mins ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

53 mins ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

3 hours ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

3 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

3 hours ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

4 hours ago