Andolana originals

ಓದುಗರ ಪತ್ರ: ಅಮೃತ್ ನಗರ ಯೋಜನೆ ವಿಫಲವಾಯಿತೆ?

ಅಟಲ್ ಮಿಷನ್ ಫಾರ್ ರೆಜುನೇಷನ್ ಅಂಡ್ ಅರ್ಬನ್ ಟ್ರಾನ್ಸ್ ಫರ್ಮೇಷನ್ (ಅಮೃತ್) ನಗರ ಯೋಜನೆಯನ್ನು ೨೦೧೫ರಲ್ಲಿ ನಗರಗಳ ಶಾಶ್ವತ ಅಭಿವೃದ್ಧಿಗಾಗಿ ಭಾರತ ಸರ್ಕಾರ ಆರಂಭಿಸಿತು. ಎಲ್ಲ ನಗರ ಮನೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ, ಒಳಚರಂಡಿ ವ್ಯವಸ್ಥೆಯ ಸುಧಾರಣೆ, ಹಸಿರು ಪ್ರದೇಶಗಳ ವಿಸ್ತರಣೆ ಮತ್ತು ಮಳೆನೀರು ಸಂಗ್ರಹ ಈ ಯೋಜನೆಯ ಪ್ರಮುಖ ಉದ್ದೇಶವಾಗಿತ್ತು. ಆದರೆ ವರದಿಗಳ ಪ್ರಕಾರ ಯೋಜನೆಯ ಅನುಷ್ಠಾನದಲ್ಲಿ ಅನೇಕ ಸಮಸ್ಯೆಗಳು ಎದುರಾಗಿ ಅದು ತನ್ನ ಗುರಿಯನ್ನು ಸಾಧಿಸಲು ವಿಫಲವಾಗಿದೆ.

ಯೋಜನೆ ವಿಫಲವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯದ ಕೊರತೆ, ಅನೇಕ ನಗರಗಳ ಸ್ಥಳೀಯ ಸಂಸ್ಥೆಗಳು ಸೂಕ್ತ ಯೋಜನೆ ರೂಪಿಸುವಲ್ಲಿ ವಿಫಲವಾಗಿರುವುದು, ಟೆಂಡರ್ ಪ್ರಕ್ರಿಯೆಯಲ್ಲಿ ಅಸ್ಪಷ್ಟತೆ, ತಾಂತ್ರಿಕ ಅನುಮೋದನೆಗಳ ವಿಳಂಬ ಮತ್ತು ನಿರ್ವಹಣೆಯ ಅಸಮರ್ಪಕತೆಗಳಿಂದ ಕಾಮಗಾರಿಗಳು ಸಂಪೂರ್ಣ ವಾಗಿ ನಿಂತುಹೋಗಿವೆ.

ಹಣಕಾಸಿನ ದುರ್ಬಳಕೆ ಮತ್ತು ಅಕ್ರಮಗಳೂ ಈ ಯೋಜನೆಯ ಮೇಲೆ ಕಳಂಕ ತಂದಿವೆ ಎನ್ನಲಾಗುತ್ತಿದೆ. ಕೆಲವು ನಗರಗಳಲ್ಲಿ ಬಿಲ್ ಪಾವತಿಗಳಲ್ಲಿ ಅಕ್ರಮಗಳು ನಡೆದಿದ್ದು, ನಿಜವಾದ ಕಾರ್ಯನಿರ್ವಹಣೆಗಿಂತ ರಾಜಕೀಯ ಪ್ರಭಾವ ಹೆಚ್ಚಾಗಿದೆ ಎಂಬುದು ಜನಜನಿತ. ನಾಗರಿಕರ ಭಾಗವಹಿಸುವಿಕೆಯ ಕೊರತೆಯೂ ಮತ್ತೊಂದು ಸಮಸ್ಯೆಯಾಗಿದೆ. ಜನರ ನಿಜವಾದ ಅಗತ್ಯಗಳನ್ನು ಪರಿಗಣಿಸದೆ ಯೋಜನೆ ರೂಪಿಸಿದದರಿಂದ ಈ ಯೋಜನೆ ಜನಹಿತಕಾರಿಯಾಗಿಲ್ಲ ಎನ್ನಲಾಗಿದೆ.

ಒಟ್ಟಾರೆ ನೋಡಿದರೆ, ಅಮೃತ್ ನಗರ ಯೋಜನೆ ಉದ್ದೇಶ ಒಳ್ಳೆಯದಾದರೂ ಅದರ ಅನುಷ್ಠಾನದಲ್ಲಿ ಕಂಡುಬಂದ ನಿರ್ಲಕ್ಷ್ಯ, ಅಸಮರ್ಪಕತೆ ಮತ್ತು ಪಾರದರ್ಶಕತೆಯ ಕೊರತೆಯಿಂದ ವಿಫಲವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಯೋಜನೆಗಳು ಯಶಸ್ವಿಯಾಗಲು ಸರ್ಕಾರವು ಪಾರದರ್ಶಕ ನಿರ್ವಹಣೆ, ಸ್ಥಳೀಯ ಜನರ ಪಾಲ್ಗೊಳ್ಳುವಿಕೆ ಮತ್ತು ವ್ಯವಸ್ಥೆಗಳನ್ನು ಬಲಪಡಿಸಬೇಕು ಆಗ ಮಾತ್ರ ನಗರಾಭಿವೃದ್ಧಿಯ ನಿಜವಾದ ಅರ್ಥ ಸಾಕಾರವಾಗುತ್ತದೆ.

-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

4 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

4 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

4 hours ago