Andolana originals

ಓದುಗರ ಪತ್ರ: ಅಮೃತ್ ನಗರ ಯೋಜನೆ ವಿಫಲವಾಯಿತೆ?

ಅಟಲ್ ಮಿಷನ್ ಫಾರ್ ರೆಜುನೇಷನ್ ಅಂಡ್ ಅರ್ಬನ್ ಟ್ರಾನ್ಸ್ ಫರ್ಮೇಷನ್ (ಅಮೃತ್) ನಗರ ಯೋಜನೆಯನ್ನು ೨೦೧೫ರಲ್ಲಿ ನಗರಗಳ ಶಾಶ್ವತ ಅಭಿವೃದ್ಧಿಗಾಗಿ ಭಾರತ ಸರ್ಕಾರ ಆರಂಭಿಸಿತು. ಎಲ್ಲ ನಗರ ಮನೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ, ಒಳಚರಂಡಿ ವ್ಯವಸ್ಥೆಯ ಸುಧಾರಣೆ, ಹಸಿರು ಪ್ರದೇಶಗಳ ವಿಸ್ತರಣೆ ಮತ್ತು ಮಳೆನೀರು ಸಂಗ್ರಹ ಈ ಯೋಜನೆಯ ಪ್ರಮುಖ ಉದ್ದೇಶವಾಗಿತ್ತು. ಆದರೆ ವರದಿಗಳ ಪ್ರಕಾರ ಯೋಜನೆಯ ಅನುಷ್ಠಾನದಲ್ಲಿ ಅನೇಕ ಸಮಸ್ಯೆಗಳು ಎದುರಾಗಿ ಅದು ತನ್ನ ಗುರಿಯನ್ನು ಸಾಧಿಸಲು ವಿಫಲವಾಗಿದೆ.

ಯೋಜನೆ ವಿಫಲವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯದ ಕೊರತೆ, ಅನೇಕ ನಗರಗಳ ಸ್ಥಳೀಯ ಸಂಸ್ಥೆಗಳು ಸೂಕ್ತ ಯೋಜನೆ ರೂಪಿಸುವಲ್ಲಿ ವಿಫಲವಾಗಿರುವುದು, ಟೆಂಡರ್ ಪ್ರಕ್ರಿಯೆಯಲ್ಲಿ ಅಸ್ಪಷ್ಟತೆ, ತಾಂತ್ರಿಕ ಅನುಮೋದನೆಗಳ ವಿಳಂಬ ಮತ್ತು ನಿರ್ವಹಣೆಯ ಅಸಮರ್ಪಕತೆಗಳಿಂದ ಕಾಮಗಾರಿಗಳು ಸಂಪೂರ್ಣ ವಾಗಿ ನಿಂತುಹೋಗಿವೆ.

ಹಣಕಾಸಿನ ದುರ್ಬಳಕೆ ಮತ್ತು ಅಕ್ರಮಗಳೂ ಈ ಯೋಜನೆಯ ಮೇಲೆ ಕಳಂಕ ತಂದಿವೆ ಎನ್ನಲಾಗುತ್ತಿದೆ. ಕೆಲವು ನಗರಗಳಲ್ಲಿ ಬಿಲ್ ಪಾವತಿಗಳಲ್ಲಿ ಅಕ್ರಮಗಳು ನಡೆದಿದ್ದು, ನಿಜವಾದ ಕಾರ್ಯನಿರ್ವಹಣೆಗಿಂತ ರಾಜಕೀಯ ಪ್ರಭಾವ ಹೆಚ್ಚಾಗಿದೆ ಎಂಬುದು ಜನಜನಿತ. ನಾಗರಿಕರ ಭಾಗವಹಿಸುವಿಕೆಯ ಕೊರತೆಯೂ ಮತ್ತೊಂದು ಸಮಸ್ಯೆಯಾಗಿದೆ. ಜನರ ನಿಜವಾದ ಅಗತ್ಯಗಳನ್ನು ಪರಿಗಣಿಸದೆ ಯೋಜನೆ ರೂಪಿಸಿದದರಿಂದ ಈ ಯೋಜನೆ ಜನಹಿತಕಾರಿಯಾಗಿಲ್ಲ ಎನ್ನಲಾಗಿದೆ.

ಒಟ್ಟಾರೆ ನೋಡಿದರೆ, ಅಮೃತ್ ನಗರ ಯೋಜನೆ ಉದ್ದೇಶ ಒಳ್ಳೆಯದಾದರೂ ಅದರ ಅನುಷ್ಠಾನದಲ್ಲಿ ಕಂಡುಬಂದ ನಿರ್ಲಕ್ಷ್ಯ, ಅಸಮರ್ಪಕತೆ ಮತ್ತು ಪಾರದರ್ಶಕತೆಯ ಕೊರತೆಯಿಂದ ವಿಫಲವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಯೋಜನೆಗಳು ಯಶಸ್ವಿಯಾಗಲು ಸರ್ಕಾರವು ಪಾರದರ್ಶಕ ನಿರ್ವಹಣೆ, ಸ್ಥಳೀಯ ಜನರ ಪಾಲ್ಗೊಳ್ಳುವಿಕೆ ಮತ್ತು ವ್ಯವಸ್ಥೆಗಳನ್ನು ಬಲಪಡಿಸಬೇಕು ಆಗ ಮಾತ್ರ ನಗರಾಭಿವೃದ್ಧಿಯ ನಿಜವಾದ ಅರ್ಥ ಸಾಕಾರವಾಗುತ್ತದೆ.

-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

1 hour ago

ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…

1 hour ago

ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ, ಆದರೆ ಇದೇ ಪರಿಹಾರವಲ್ಲ: ಪಾಲಿಕೆ ಆಯುಕ್ತ ಶೇಖ್ ತನ್ವಿರ್ ಆಸೀಫ್

ಮೈಸೂರು: ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸಿಫ್‌…

1 hour ago

ತಮಿಳುನಾಡು ಸಿಎಂ ವಿಜಯ್‌ಗೆ ಕರೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್‌ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ…

2 hours ago

ಮೇ.13 ರಿಂದ 3 ದಿನಗಳ ಕಾಲ ಟ್ರಂಪ್‌ ಚೀನಾ ಪ್ರವಾಸ

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ…

2 hours ago

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

3 hours ago