ಓದುಗರ ಪತ್ರ
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ ಪ್ರಭಾವ, ತಪ್ಪು ಮಾಹಿತಿಯ ಹರಿವು ಮತ್ತು ರಾಜಕೀಯ ಧ್ರುವೀಕರಣ ಪರಿಣಾಮವಾಗಿ ದ್ವೇಷ ಭಾಷಣ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ದ್ವೇಷ ಭಾಷಣ ನಿಯಂತ್ರಿಸುವ ನ್ಯಾಯಸಮ್ಮತ ಕಾನೂನು ತಂದಿರುವುದು ಸ್ವಾಗತಾರ್ಹ. ಆದರೆ, ಈ ಕಾನೂನು ಜಾರಿಗೆ ಬಂದಾಗ ಸ್ವತಂತ್ರ ಅಭಿಪ್ರಾಯ, ಸಾರ್ವಜನಿಕ ಚರ್ಚೆ ಮತ್ತು ಪ್ರಜಾಸತ್ತಾತ್ಮಕ ಸಂವಾದಕ್ಕೆ ಅಡ್ಡಿಯಾಗಬಾರದು. ಇದರ ಬಗ್ಗೆ ನಾಗರಿಕರಿಗಿರುವ ಆತಂಕವನ್ನು ಕೂಡ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು.
ದ್ವೇಷ ಭಾಷಣ ತಡೆಯುವ ಹೆಸರಿನಲ್ಲಿ ಸಾಮಾನ್ಯ ಟೀಕೆಗಳು ಅಥವಾ ರಾಜಕೀಯ ಭಿನ್ನಾಭಿಪ್ರಾಯಗಳು ದಮನಗೊಳ್ಳುವ ಪರಿಸ್ಥಿತಿ ಬರಬಾರದು. ಆದ್ದರಿಂದ ಈ ಮಸೂದೆ ಬಗ್ಗೆ ಎಲ್ಲಾ ಪಕ್ಷಗಳು, ತಜ್ಞರು ಮತ್ತು ನಾಗರಿಕರು ಸೇರಿ ವಿಸ್ತ ತ ಚರ್ಚೆ ನಡೆಸಿ ಮಸೂದೆಯನ್ನು ಸ್ಪಷ್ಟ, ನಿಷ್ಪಕ್ಷಪಾತ ಮತ್ತು ದುರುಪಯೋಗ ಮಾಡಲು ಅವಕಾಶವಿಲ್ಲದಂತೆ ಕಾರ್ಯರೂಪಕ್ಕೆ ತರುವುದು ಮುಖ್ಯ.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…