Andolana originals

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ ಕಾರಣ. ಈ ಹಿಂದೆ ಹೀಗೆ ಆಗುತ್ತಿರಲಿಲ್ಲ.

ಕಾರಣ ಮೆಟ್ಟಿಲುಗಳ ಮೂಲಕ ಮತ್ತು ಬಸ್ಸುಗಳಲ್ಲಿ ಬಂದ ಭಕ್ತರು ದೇವಸ್ಥಾನದ ಮುಖ್ಯದ್ವಾರದ ಮುಂದೆಯೇ ನಿಂತು ತಾಯಿ ಚಾಮುಂಡಿಗೆ ಕೈ ಮುಗಿದು ಬೆಟ್ಟದಲ್ಲಿಯೇ ಇರುವ ಇತರ ದೇವಸ್ಥಾನ ಗಳಿಗೆ ತೆರಳಿ ದೇವರ ದರ್ಶನ ಮಾಡಿಕೊಂಡು ತೆರಳುತ್ತಿದ್ದರು.ಆಗ ವಿಪರೀತ ಜನ ಸಂದಣಿ ಉಂಟಾಗುತ್ತಿರಲಿಲ್ಲ. ಆದರೆ ಈಗ ಮಾಡಿರುವ ಅವೈಜ್ಞಾನಿಕ ಮಾರ್ಪಾಡಿನಿಂದ ಮೆಟ್ಟಿಲು ಹತ್ತಿ ಬರುವವರು ಮತ್ತು ಬಸ್‌ನಲ್ಲಿ ಬರುವ ಭಕ್ತರು ಬ್ಯಾರಿಕೇಡ್ ಚಕ್ರವ್ಯೂಹದೊಳಗೆ ಸಿಲುಕಿ ದೇವಿ ದರ್ಶನ ಮಾಡಿಯೇ ತೆರಳಬೇಕು ಎಂಬ ತೀರ್ಮಾನವನ್ನು ಅಧಿಕಾರಿವರ್ಗ ಮಾಡಿದೆ.

ಅಧಿಕಾರಿ ವರ್ಗ ಇನ್ನಾದರೂ ಮೆಟ್ಟಿಲು ಹತ್ತಿ ಬರುವವರು ಮತ್ತು ಬಸ್ ಮೂಲಕ ಬರುವ ಭಕ್ತರಿಗೆ ಇರುವ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ಹೊರಗಡೆ ನಿಂತು ಕೈ ಮುಗಿದು ಹೋಗುವಂತೆಯೇ ವ್ಯವಸ್ಥೆ ಮಾಡಿ ಭಕ್ತರಿಗೆ ಬೃಹತ್ ಎಲ್ ಇ ಡಿ ಪರದೆಯ ಮೂಲಕ ತಾಯಿ ಚಾಮುಂಡಿ ದರ್ಶನ ಮಾಡಿಸಿದರೆ ಜನ ಸಂದಣಿ ಕಡಿಮೆ ಆಗುತ್ತದೆ. ದೇವಿಯ ದರ್ಶನ ಮಾಡಿಯೇ ತೆರಳುತ್ತೇವೆ ಎನ್ನುವ ಭಕ್ತರಿಗೆ ದೇವಸ್ಥಾನದ ಎಡ ಭಾಗದಲ್ಲಿ (ಧರ್ಮ ದರ್ಶನ ಸಾಲು ನಿಲ್ಲುವ ಕಡೆ) ಬ್ಯಾರಿಕೇಡ್ ವ್ಯವಸ್ಥೆ ಮಾಡಲಿ.

-ಅಹಲ್ಯ ಸಿ.ನಾ.ಚಂದ್ರ, ಮೈಸೂರು

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 min ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

10 mins ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

13 mins ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

15 mins ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

18 mins ago

ಎಂಬತ್ತರ ದಶಕದ ಮೈಸೂರಿನ ಜೆನ್ ಝೀಗಳು

ಎಸ್.ಗಂಗಾಧರಯ್ಯ ಕಾಲೇಜು ಹಾಗೂ ಯೂನಿ ವರ್ಸಿಟಿಗಳೇ ಚಳವಳಿಗಳ ತಾಲೀಮು ರಂಗವಾಗಿದ್ದ ಕಾಲವೊಂದಿತ್ತು. ಮೇಷ್ಟ್ರುಗಳೂ ವಿದ್ಯಾರ್ಥಿಗಳನ್ನು ಚಳವಳಿಗಳಿಗೆ ಪ್ರೇರೇಪಿಸುತ್ತಿದ್ದ ಹಾಗೂ ಖುದ್ದು…

24 mins ago