ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ ಅವರು ಸರ್ಕಾರವನ್ನು ಒತ್ತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಕೈಗೊಂಡಿರುವ ಕ್ರಮ ಮೆಚ್ಚುವಂತಹದ್ದು.
ನಟಿ ರಮ್ಯಾ, ಮಹಿಳಾ ತಜ್ಞೆ ಜೋಸ್ನಾ ಹಾಗೂ ಇತರೆ ಪರಿಣತರೊಂದಿಗೆ ಮಹತ್ವದ ಸಭೆ ನಡೆಸಿದ ನಂತರ ಋತುತಾರೆ ಎಂಬ ಹೆಸರಿನಲ್ಲಿ ಯೋಜನೆ ಘೋಷಿಸಿದ ಸಚಿವರು, ತಾರೆಯನ್ನೇ ಬ್ರಾಂಡ್ ಅಂಬಾಸಿಡಾರ್ ಆಗಿ ನೇಮಕ ಮಾಡಿರುವುದು ಶ್ಲಾಘನೀಯ.
೪೦ ವರ್ಷ ಮೇಲ್ಪಟ್ಟ ಮಹಿಳೆಯರಲ್ಲಿ ಸಾಮಾನ್ಯವಾಗಿ ಋತುಬಂಧ ಸಮಯದಲ್ಲಿ ಗರ್ಭಕೋಶದ ಸಮಸ್ಯೆ, ಅಧಿಕ ರಕ್ತಸ್ರಾವ ಹಾಗೂ ದೇಹದಲ್ಲಿ ಪೋಷಕಾಂಶದ ಕೊರತೆ,ಮೂಳೆ ಸಂಬಂಧಿ ಕಾಯಿಲೆಗಳು ಹಾಗೂ ಮಾನಸಿಕ ತೊಂದರೆ ಉಂಟಾಗಿ ಯಾವ ಯಾವ ಸಮಯದಲ್ಲಿ ಸರಿಯಾದ ಆರೈಕೆ ಹಾಗೂ ಔಷಧ ಮುಖ್ಯ ಎಂಬ ಮಾಹಿತಿ ನೀಡುವ ಗೃಹಾರೋಗ್ಯ ಪುಸ್ತಕ ಹೊರತಂದು ಋತುತಾರೆ ಯೋಜನೆ ಅನುಷ್ಠಾನಗೊಳಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವರು ಹೇಳಿರುವುದು ಅವರ ಕಳಕಳಿಯನ್ನು ತೋರಿಸುತ್ತದೆ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…